ಚಿಕ್ಕಮಗಳೂರು ಕೊವಿಡ್ ಆಸ್ಪತ್ರೆಯಲ್ಲೇ ಸಿಬ್ಬಂದಿಯ ಕಳ್ಳಾಟ
ಬೆಂಗಳೂರು, ಜುಲೈ.13: ಕೊರೊನಾವೈರಸ್ ಸೋಂಕಿಗೆ ಸಿಲುಕಿ ನರಳುತ್ತಿದ್ದ ರೋಗಿಯ ಜೀವದ ಜೊತೆಗೆ ಆಸ್ಪತ್ರೆಯ ಸಿಬ್ಬಂದಿ ಕಳ್ಳಾಟ ಆಡುತ್ತಿದ್ದಾರೆ. ಆಂಬುಲೆನ್ಸ್ ನಲ್ಲಿ ಆಗಮಿಸಿದ ಸೋಂಕಿತನನ್ನು ದಾಖಲಿಸಿಕೊಳ್ಳಲು ಸಿಬ್ಬಂದಿ ಕಳ್ಳಾಟ ಆಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕೊರೊನಾವೈರಸ್ ಸೋಂಕಿತ ವ್ಯಕ್ತಿಯನ್ನು ಶೃಂಗೇರಿಯಿಂದ ಚಿಕ್ಕಮಗಳೂರಿನ ಕೊವಿಡ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಈ ವೇಳೆ ವ್ಯಕ್ತಿಯನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಸಿಬ್ಬಂದಿ ತಮ್ಮಲ್ಲಿ ಬೆಡ್ ಗಳ ಕೊರತೆಯಿದೆ ಎಂದು ಸುಳ್ಳು ಹೇಳಿದ್ದಾರೆ.
ಕೊವಿಡ್ ಆಸ್ಪತ್ರೆಯ ಸಿಬ್ಬಂದಿಯ ವರ್ತನೆಯಿಂದ ರೋಸಿ ಹೋದ ಸೋಂಕಿತ ವ್ಯಕ್ತಿಯ ಈ ಕುರಿತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತಿದ್ದಂತೆ ಅಲರ್ಟ್ ಆಗಿದ್ದಾರೆ. ಅಲ್ಲದೇ ಕ್ಷಣಮಾತ್ರದಲ್ಲೇ ಬೆಡ್ ವ್ಯವಸ್ಥೆ ಕಲ್ಪಿಸಿದ್ದು, ಸೋಂಕಿತನನ್ನು ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗಕ್ಕೆ ಕರೆದೊಯ್ಯಲು ತಾಕೀತು:
ಚಿಕ್ಕಮಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ಸರಿಯಾದ ಬೆಡ್ ವ್ಯವಸ್ಥೆಯಿಲ್ಲ. ಹೀಗಾಗಿ ಕೊರೊನಾವೈರಸ್ ಸೋಂಕಿತನನ್ನು ಶಿವಮೊಗ್ಗದ ಕೊವಿಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಮೊದಲಿಗೆ ಆಸ್ಪತ್ರೆಯ ಸಿಬ್ಬಂದಿ ಒತ್ತಾಯಿಸಿದ್ದರು ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಸರ್ಕಾರವು ಒಂದು ಕಡೆ ಬೆಡ್ ವ್ಯವಸ್ಥೆ ಕಲ್ಪಿಸುವುದಕ್ಕೆ ಹೆಣಗಾಡುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಕೊವಿಡ್ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆಯಿದ್ದಲೂ ಸಿಬ್ಬಂದಿಯು ಸೋಂಕಿತರನ್ನು ದಾಖಲಿಸಿಕೊಳ್ಳುವುದಕ್ಕೆ ಹಿಂದುಮುಂದು ನೋಡುತ್ತಿರುವುದಕ್ಕೆ ಇದೊಂದು ಘಟನೆ ಜೀವಂತ ಸಾಕ್ಷಿಯಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications