ಸ್ಮಶಾನ ಜಾಗಕ್ಕೆ ಆಗ್ರಹಿಸಿ ತಾಲೂಕು ಕಚೇರಿ ಮುಂದೆ ದಲಿತ ಕುಟುಂಬಗಳ ಅನಿರ್ದಿಷ್ಟಾವಧಿ ಪ್ರತಿಭಟನೆ
ಚಿಕ್ಕಮಗಳೂರು,ನವೆಂಬರ್ 18: ಜಿಲ್ಲೆಯ ಅಜ್ಜಂಪುರ ತಾಲೂಕಿನ ದಲಿತ ಕುಟುಂಬಗಳು ತಮ್ಮ ಸಮುದಾಯದವರಿಗೆ ಸ್ಮಶಾನದ ಜಾಗ ಗುರುತು ಮಾಡದ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.
ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಸಮೀಪದ ಎ.ಕೆ.ಕಾಲೋನಿಯ ದಲಿತ ಸಮುದಾಯಕ್ಕೆ ಈವರೆಗೂ ಸ್ಮಶಾನದ ಜಾಗ ನಿಗದಿ ಮಾಡಿರಲಿಲ್ಲ. ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದರೆ ಅಂತ್ಯಸಂಸ್ಕಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಹೀಗಾಗಿ ಎ.ಕೆ.ಕಾಲೋನಿಯ ದಲಿತ ಕುಟುಂಬಗಳು ಅಜ್ಜಂಪುರ ತಾಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಹತ್ತಾರು ವರ್ಷಗಳಿಂದ ದಲಿತರಿಗೆ ಸರ್ಕಾರ ಸ್ಮಶಾನದ ಜಾಗ ಗುರುತು ಮಾಡಿಕೊಟ್ಟಿಲ್ಲ. ಹಲವು ವರ್ಷಗಳಿಂದ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ದಲಿತ ಕುಟುಂಬಗಳು ಅಜ್ಜಂಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಕೂತು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪ್ರತಿಭಟನೆಗೆ ಕುಳಿತ ದಲಿತ ಕುಟುಂಬಗಳು ಸರ್ಕಾರ ಸ್ಮಶಾನದ ಜಾಗ ನೀಡುವವರೆಗೂ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೇ ಎರಡು ಕಡೆ ಜಾಗ ಗುರುತು ಮಾಡಿದ್ದರು. ಆದರೆ, ಯಾವ ಅಧಿಕಾರಿಯೂ ಸ್ಥಳ ಪರಿಶೀಲನೆ ಮಾಡದೆ ಕಾಲ ಹರಣ ಮಾಡಿದ್ದಾರೆ. ದಲಿತ ಸಮುದಾಯದಲ್ಲಿ ಯಾರಾದರೂ ಸಾವಿಗೀಡಾದರೆ ಮಣ್ಣು ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಕೂಡಲೇ ಅಧಿಕಾರಿಗಳು ಸ್ಮಶಾನದ ಜಾಗ ಮಂಜೂರು ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ನಾಪತ್ತೆ
ಹಾಸನ: ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ದಾಸರಹಳ್ಳಿ ನಿವಾಸಿ ಕುಮಾರ್ ದಂಪತಿ ಸಾಕುಮಗಳು ನಂದಿತಾ(13) ಕಾಣೆಯಾದ ಬಾಲಕಿ ಎಂದು ಗುರುತಿಸಲಾಗಿದೆ. ಅಣತಿ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನೆಲೆಸಿದ್ದ ವಿದ್ಯಾರ್ಥಿನಿ ನವೆಂಬರ್ 7ರ ಸಂಜೆ 4 ಗಂಟೆಗೆ ಶಾಲೆ ಮುಗಿಸಿ ವಾಪಸ್ ಆಗುವ ವೇಳೆ ನಾಪತ್ತೆಯಾಗಿದ್ದಾಗಿದ್ದಾಳೆ.
ಇನ್ನು ಅಣತಿ ಗ್ರಾಮದ ಗಿರೀಶ್ ಎಂಬಾತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿರುವ ಬಗ್ಗೆ ಪೋಷಕರ ದೂರು ದಾಖಲಿಸಿದ್ದಾರೆ. ಕುಮಾರ್ ದಂಪತಿ ತಮಗೆ ಮಕ್ಕಳಿಲ್ಲದ ಕಾರಣ ಸಂಬಂಧಿಕರ ಮಗಳನ್ನು ದತ್ತು ಪಡೆದು ಸಾಕಿಕೊಂಡಿದ್ದರು. ಇದೀಗ ಮಗಳ ನಿಗೂಢ ನಾಪತ್ತೆಯಿಂದ ಪೋಷಕರು ಆತಂಕಗೊಂಡಿದ್ದಾರೆ. ಘಟನೆ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications