ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ ಅಮಾನವೀಯ ಕೃತ್ಯ
ಚಿಕ್ಕಮಗಳೂರು, ಮೇ. 22 ಇಡೀ ಪೊಲೀಸ್ ವ್ಯವಸ್ಥೆಯೇ ತಲೆ ತಗ್ಗಿಸುಂತಹ ಅಮಾನವೀಯ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಡಿಗೆರೆಯಲ್ಲಿ ನಡೆದಿದೆ. ದಲಿತ ಯುವಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸ್ ಅಧಿಕಾರಿ ಮೂತ್ರ ಕುಡಿಸಿದ್ದಾನೆ.
ದಲಿತ ಯುವಕನಿಗೆ ಮೂತ್ರ ಕುಡಿಸಿರುವ ಆರೋಪ ಹೊತ್ತವರು ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್. ಅರ್ಜುನ್ ಈ ಕೃತ್ಯ ಖಂಡಿಸಿ , ನ್ಯಾಯ ಕೋರಿ ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

Recommended Video
ಲಾಕ್ ಡೌನ್ ನನ್ನು ಮತ್ತಷ್ಟು ಕಠಿಣ ಮಾಡಿದ ಯಡಿಯೂರಪ್ಪ | Oneindia Kannada
ಬಿಹಾರ , ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಅಮಾನವೀಯ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ದಲಿತ ಯುವಕನಿಗೆ ಮೂತ್ರ ಕುಡಿಸಿರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ರಾಕ್ಷಸ. ಈ ಯುವಕನಿಗೆ ಆಗಿರುವ ಅವಮಾನ, ಅನ್ಯಾಯಕ್ಕೆ ನ್ಯಾಯ ಬೇಕಿದೆ ಎಂದು ಕೋರಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.












Click it and Unblock the Notifications