ಆಪರೇಷನ್ ಭೈರ ವಿಫಲ: ದಸರಾ ಆನೆಗಳು ವಾಪಸ್, ಸ್ಥಳೀಯರ ಆಕ್ರೋಶ
ಚಿಕ್ಕಮಗಳೂರು ನವೆಂಬರ್ 7: ಕಾಫಿನಾಡಿನಲ್ಲಿ ಕಳೆದ ಕೆಲ ವರ್ಷಗಳಿಂದ ಭಾರಿ ತೊಂದರೆ ಕೊಡುತ್ತಿದ್ದ ಭೈರ ಎನ್ನುವ ಕಾಡಾನೆಯನ್ನು ಹಿಡಿಯಲು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮಕ್ಕೆ ಬಂದಿದ್ದ ದಸರಾ ಆನೆಗಳು ವಾಪಸ್ ಆಗಿವೆ.
ಕಳೆದ ಭಾನುವಾರ ಊರುಬಗೆ ಗ್ರಾಮಕ್ಕೆ ಬಂದಿದ್ದ ಈ ದಸರಾ ಆನೆಗಳ ಜೊತೆ ನೂರು ಮಂದಿ ಅರಣ್ಯ ಸಿಬ್ಬಂದಿ ತಂಡ ಸೋಮವಾರದಿಂದ ಭೈರ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಎರಡು ಮೂರು ದಿನಗಳ ಕಾಲ ಹುಡುಕಾಟ ನಡೆಸಿದರೂ ಕಾಡಾನೆ ಪತ್ತೆಯಾಗಿಲ್ಲ. ಆದರೆ ಕಾರ್ಯಾಚರಣೆ ಮುಂದುವರಿಸಿದ್ದ ಅರಣ್ಯಾಧಿಕಾರಿಗಳಿಗೆ ಒಂದಾದ ಮೇಲೊಂದು ಸಮಸ್ಯೆ ಎದುರಾಗಿತ್ತು.
ಆಪರೇಷನ್ ಭೈರ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಅಭಿಮನ್ಯು ಆನೆಗೆ ಆರೋಗ್ಯ ಹದೆಗೆಟ್ಟಿದೆ. ಅದರ ಚಿಕಿತ್ಸೆ ಮುಗಿಯುತ್ತಿದ್ದಂತೆ ಕಾರ್ಯಾಚರಣೆಯಲ್ಲಿದ್ದ ಗೋಪಾಲಸ್ವಾಮಿ ಆನೆ ಮದವೇರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಗೋಪಾಲಸ್ವಾಮಿ ಆನೆಯನ್ನು ಹತೋಟಿಗೆ ತರುವುದೇ ಅರಣ್ಯಾಧಿಕಾರಿಗಳಿಗೆ ದೊಡ್ಡ ಸವಾಲ್ ಆಗಿತ್ತು. ಕೊನೆಗೆ ಜಿಲ್ಲಾಧಿಕಾರಿಗಳೇ ಕಾರ್ಯಾಚರಣೆ ಜಾಗದಲ್ಲಿ 144 ಸೆಕ್ಷನ್ ಜಾರಿ ಮಾಡಿ ಜನರು ಯಾರು ಆನೆ ಕಾರ್ಯಾಚರಣೆಯ ಸುತ್ತ ಓಡಾಡದಂತೆ ಆದೇಶ ಹೊರಡಿಸಿದರು. ಇಷ್ಟೆಲ್ಲಾ ಅವಾಂತರಗಳು ನಡೆದ ಮೇಲೆ ಭಿಮನ್ಯು ನೇತೃತ್ವದ ಆರು ದಸರಾ ಆನೆಗಳ ತಂಡವನ್ನು ನಾಗರಹೊಳೆ ಹಾಗೂ ದುಬಾರೆ ಕ್ಯಾಂಪ್ಗೆ ವಾಪಸ್ ಕಳುಹಿಸಲಾಗಿದೆ.

ಭೈರ ಕಾಡಾನೆ ಕಾಟಕ್ಕೆ ಜನ ಬೇಸತ್ತಿದ್ದರು. ಭೈರನನ್ನ ಹಿಡಿಯುವ ಕಾರ್ಯಾಚರಣೆಗೆ ಅಷ್ಟು ಸುಲಭವಾಗಿ ಸರ್ಕಾರ ಮನಸ್ಸು ಮಾಡಿರಲಿಲ್ಲ. ಕಳೆದ ಎರಡು ತಿಂಗಳಲ್ಲೇ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ರು. ಹೀಗಾಗಿ ಕಾಡಾನೆಯನ್ನ ಹಿಡಿಯಬೇಕು ಅಂತಾ ಮೃತದೇಹವನ್ನ ಹಿಡಿದುಕೊಂಡು ಮೂಡಿಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ವೇಳೆ ಲಾಠಿಚಾರ್ಜ್ ಕೂಡ ನಡೆದಿತ್ತು. ಇಷ್ಟೆಲ್ಲಾ ನಡೆದ ಮೇಲೆ ಸರ್ಕಾರ ಕಾಡಾನೆಯನ್ನು ಹಿಡಿಯಲು ಕಾರ್ಯಾಚರಣೆಗೆ ಅನುಮತಿ ನೀಡಿತ್ತು. ಆದರೆ ಕಾರ್ಯಾಚರಣೆಗೆ ಬಂದಿದ್ದ ದಸರಾ ಆನೆಗಳು ವಾಪಸ್ ಆಗಿದ್ದು, ಈ ಎಲ್ಲಾ ಘಟನಾವಳಿಗಳಿಗೆ ಅರಣ್ಯ ಅಧಿಕಾರಿಗಳ ಬೇಜಬ್ದಾರಿತನವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಾರ್ಯಾಚರಣೆಗೆ ಬಂದಿದ್ದ ಆನೆಗಳಿಗೆ ಸ್ಥಳೀಯರು ಬೆಲ್ಲ ಸೇರಿದಂತೆ ತಿನ್ನಲು ಎಲ್ಲವನ್ನೂ ಕೊಟ್ಟು ಆನೆಗಳ ಆರೋಗ್ಯ ಹಾಳು ಮಾಡಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಆರೋಪಿಸಿದ್ದಾರೆ. ಆದರೆ ಆನೆಗಳ ಹತ್ತಿರ ಹೋಗುವುದಕ್ಕೂ ಮಾವುತನ ಅನುಮತಿ ಪಡೆಯಬೇಕಿತ್ತು. ಹೀಗಿರುವಾಗ ನಾವು ಹೇಗೆ ಆನೆಗಳಿಗೆ ಆಹಾರವನ್ನು ನೀಡುವುದು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಇನ್ನು ಕ್ಯಾಂಪ್ಗಳಲ್ಲಿ ತಂಪಾಗಿದ್ದ ದಸರಾ ಆನೆಗಳನ್ನು ಬಿಸಿಲಲ್ಲಿ ನಿಲ್ಲಿಸಿ, ಸರಿಯಾದ ವ್ಯವಸ್ಥೆ ಮಾಡದ ಕಾರಣ ಅವುಗಳ ಆರೋಗ್ಯ ಕೆಟ್ಟಿದೆ. ಇದಕ್ಕೆ ಅರಣ್ಯಾಧಿಕಾರಿಗಳೇ ಕಾರಣ. ಬಿಲ್ ಮಾಡಿಕೊಳ್ಳಲು ಈ ರೀತಿ ಕಾರ್ಯಾಚರಣೆಯ ನಾಟಕವಾಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಒಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಜಟಾಪಟಿಯಲ್ಲಿ ಆಪರೇಷನ್ ಭೈರಾ ವಿಫಲವಾಗಿದ್ದು, ಸ್ಥಳೀಯರಿಗೆ ಕಾಡಾನೆ ಕಾಟ ಮುಂದುವರಿದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications