Breaking: ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ ಸಿ.ಟಿ.ರವಿ
ಚಿಕ್ಕಮಗಳೂರು, ಡಿ.07 : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿಸಂಗ್ರಹ ನಡೆದಿದೆ.
ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿ ಸ್ವಾಗತಿಸಿದರು. ಬುಧವಾರ ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ಗುರುವಾಋ ಇರುಮುಡಿ ರೂಪದಲ್ಲಿ ಅದನ್ನ ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ.
20ಕ್ಕೂ ಹೆಚ್ಚು ಮಾಲಾಧಾರಿಗಳ ಜೊತೆಗೆ ಶಾಸಕ ಸಿ.ಟಿ. ರವಿ ಪಡಿ ಸಂಗ್ರಹ ಮಾಡಿದರು. ಬುಧವರಾ ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತ ಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ಕ್ಯಾನ್ಸಲ್ ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.

ಮಧ್ಯಾಹ್ನ ನಗರದಲ್ಲಿ ಶೋಭಾಯಾತ್ರೆ ನಡೆಯಲಿದ್ದು, ನಾಳೆ ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ಹಿಂದೂ ಸಂಘಟನೆಗಳು ನಗರವನ್ನ ಕೇಸರಿಮಯವನ್ನಾಗಿಸಿದ್ದಾರೆ. ಜಿಲ್ಲೆಯಲ್ಲಿ 4,500ಕ್ಕೂ ಅಧಿಕ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಐಜಿಪಿ ಚಂದ್ರಗುಪ್ತ ಮಂಗಳವಾರ ರಾತ್ರಿ ಚಿಕ್ಕಮಗಳೂರು ಭೇಟಿ ನೀಡಿ ಭದ್ರತಾ ಕ್ರಮಗಳ ಪರಿಶೀಲನೆ ನಡೆಸಿದ್ದಾರೆ.
47 ವರ್ಷಗಳಿಂದ ದತ್ತಪೀಠದ ಉಮೇದುವಾರಿಕೆ ಹಾಗೂ ಹಿಂದೂ ಅರ್ಚಕರಿಗಾಗಿ ಹಿಂದೂ ಸಂಘಟನೆಗಳು ಹೋರಾಡುತ್ತಿದ್ದವು. ಈ ಬಾರಿ ಹಿಂದೂ ಅರ್ಚಕರು ದತ್ತ ಪೀಠದಲ್ಲಿ ಪೂಜೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ನೇಮಿಸಿರುವ ತಾತ್ಕಾಲಿಕ ಅರ್ಚಕರು ಮೂರು ದಿನಗಳು ದತ್ತಾತ್ರೇಯ ಸ್ವಾಮಿಗೆ ಪೂಜಾ - ಕೈಂಕರ್ಯ ನಡೆಸಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications