ಸಿಎಂ ಯಡಿಯೂರಪ್ಪಗೆ ದತ್ತಾತ್ರೇಯನ ಶಾಪ: ಗಂಗಾಧರ್ ಕುಲಕರ್ಣಿ
ಚಿಕ್ಕಮಗಳೂರು, ನವೆಂಬರ್ 22: ದತ್ತಮಾಲಾ ಅಭಿಯಾನಕ್ಕೆ ಭಾನುವಾರ ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಮಾಡುವ ಮೂಲಕ ಚಾಲನೆ ದೊರೆಯಿತು.
ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ನ.22 ರಿಂದ ಐದು ದಿನಗಳ ಕಾಲ ನಡೆಯಲಿದೆ. 20ಕ್ಕೂ ಹೆಚ್ಚು ದತ್ತಭಕ್ತರು ಮಾಲಾಧಾರಣೆ ಮಾಡಿದರು. ಇದೇ ಸಂದರ್ಭದಲ್ಲಿ ದತ್ತಪೀಠವನ್ನು ಹಿಂದೂಗಳಿಗೆ ವಹಿಸುವಂತೆ ಆಗ್ರಹ ಮಾಡಲಾಯಿತು.
ಈ ವೇಳೆ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದತ್ತಾತ್ರೇಯನ ಶಾಪ ಇದೆ. ಹಿಂದೊಮ್ಮೆ ಯಡಿಯೂರಪ್ಪ ಸಿಎಂ ಆಗಿ ದತ್ತಮಾಲೆ ಧರಿಸಿ, ದತ್ತಪೀಠಕ್ಕೆ ಬರುತ್ತೇನೆ ಎಂದು ಹೇಳಿದ್ದರು. ಆದರೆ ಸಿಎಂ ಆದ ಮೇಲೆ ದತ್ತಪೀಠಕ್ಕೆ ಬರಲಿಲ್ಲವೆಂದರು.

ಈ ದತ್ತಮಾಲಾ ಅಭಿಯಾನದ ಕೊನೆ ದಿನ ದತ್ತಪೀಠಕ್ಕೆ ಬಂದು ಅವರ ಶಾಪ ವಿಮುಕ್ತಿಗೊಳಿಸಿಕೊಳ್ಳಬೇಕು. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ಪೂರ್ಣಾವಧಿ ಅಧಿಕಾರ ಮಾಡಲಿಲ್ಲ. ದತ್ತಾತ್ರೇಯನ ಶಾಪದಿಂದ ಹೀಗಾಗಿದೆ ಎಂದು ಹೇಳಿದರು.
ಶಾಪ ವಿಮೋಚನೆ ಆಗಬೇಕಾದರೆ ದತ್ತಪೀಠಕ್ಕೆ ಬರಬೇಕು. ದತ್ತಪೀಠಕ್ಕೆ ಮಾಲೆ ಹಾಕಿಕೊಂಡು ಬಂದು, ದತ್ತಪೀಠವನ್ನು ಹಿಂದೂಗಳಿಗೆ ವಹಿಸಬೇಕು. ಆಗ ಮುಂದಿನ ದಿನಗಳಲ್ಲಿ ಪೂರ್ಣಾವಧಿ ಅಧಿಕಾರ ನಡೆಸುವುದಕ್ಕೆ ಗುರುಗಳ ಆಶೀರ್ವಾದ ಸಿಗುತ್ತದೆ ಎಂದು ಗಂಗಾಧರ್ ಕುಲಕರ್ಣಿ ತಿಳಿಸಿದರು.
ಹಿಂದೂಗಳಿಗೆ ದತ್ತಪೀಠ ವಹಿಸುವುದಕ್ಕೆ ಯಡಿಯೂರಪ್ಪರಿಗೆ ಒಳ್ಳೆಯ ಅವಕಾಶವಿದ್ದು, ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಬಜೆಟ್ ಅಧಿವೇಶನದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ದತ್ತಪೀಠ ಹಿಂದೂಗಳಿಗೆ ವಹಿಸುವುದಕ್ಕೆ ಇದೇ ಸೂಕ್ತ ಸಮಯ. ಎಲ್ಲಾ ಕೋರ್ಟ್ ಗಳಲ್ಲಿ ದತ್ತಪೀಠ ಹಿಂದೂಗಳಿಗೆ ಸೇರಬೇಕೆಂದು ತೀರ್ಪು ಬಂದಿದೆ. ಸದ್ಯ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರವೇ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದೆ ಎಂದು ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications