ಮೂಡಿಗೆರೆ: ₹10 ಸಾವಿರ ಲಂಚಕ್ಕೆ ಬೇಡಿಕೆ, ಲೋಕಾಯುಕ್ತ ಬಲೆಗೆ ಬಿದ್ದ DDPI
ಚಿಕ್ಕಮಗಳೂರು, ನವೆಂಬರ್, 03: ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು ಎಸ್.ಡಿ.ಎ.ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದು, ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು.

ಒಂದು ಫೈಲ್ಗೆ 5 ಸಾವಿರದಂತೆ 2 ಫೈಲ್ಗೆ 10 ಸಾವಿರ ಕೇಳಿದ್ದರು. ಈ ಬಗ್ಗೆ ಮೂಡಿಗೆರೆ ಮೂಲದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನೆಲೆ ಡಿಡಿಪಿಐ ರಂಗನಾಥ ಸ್ವಾಮಿ ಮೇಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿದೆ.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದ ಘಟನೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಸಂಜೆ ಸುಮಾರು 7ಗಂಟೆಯವರೆಗೂ ಮನೆಯಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದರು.
ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ ಕೃಷ್ಣಮೂರ್ತಿ ಅವರ ಕುವೆಂಪು ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 600 ಗ್ರಾಂ ಚಿನ್ನ, 2ಕೆಜಿ ಬೆಳ್ಳಿ, 2ಕಾರು ಹಾಗೂ 10 ನಿವೇಶನಗಳು ಪತ್ತೆಯಾಗಿದ್ದವು. ಚಿತ್ರದುರ್ಗ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯಕ ಅವರ ಚಂದ್ರಾ ಲೇಔಟ್ನಲ್ಲಿರುವ ಮನೆಯಲ್ಲಿ 650 ಗ್ರಾಂ ಚಿನ್ನ, 4ಕೆಜಿ ಬೆಳ್ಳಿ, 2ಲಕ್ಷ ನಗದು, 11ನಿವೇಶನಗಳು ಹಾಗೂ ಇನ್ನೋವಾ ಸೇರಿದಂತೆ ಎರಡು ಕಾರುಗಳು ಇರುವುದು ಪತ್ತೆಯಾಗಿದ್ದವು
ಹಿರಿಯೂರು ನಗರದಲ್ಲಿರುವ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪ್ರತ್ಯೇಕ ತಂಡವಾಗಿ ಆಗಮಿಸಿ, ಮನೆ ಮೇಲೆ ದಾಳಿ ನಡೆಸಿದ್ದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಸೇರಿದಂತೆ, ತುಮಕೂರು, ಹಾವೇರಿ, ಬಳ್ಳಾರಿ, ರಾಯಚೂರು,ಹಾಸನ, ತುಮಕೂರು, ಬೆಂಗಳೂರು ನಗರ, ಮಂಡ್ಯ, ಕಲ್ಬುರ್ಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ಸೇರಿ 35.54 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು.
ಉಡುಪಿಯಲ್ಲಿ ಐಟಿ ದಾಳಿ
ಹಾಗೆಯೇ ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿ ನಡೆಸಿದ್ದರು.
ಮಂಗಳೂರಿನ ಕದ್ರಿಯ ಬಳಿಯ ಶಿವಭಾಗ್ನ ಆಭರಣ ಜ್ಯುವೆಲ್ಲರಿಯ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು, ಬೆಳಗ್ಗಿನಿಂದ ದಾಖಲೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ. ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಅವರ ಮಾಲೀಕತ್ವದಲ್ಲಿ ಆಭರಣ ಜ್ಯುವೆಲ್ಲರಿ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿವೆ. ಇನ್ನು ಉಡುಪಿಯಲ್ಲೂ ಹಲವು ಕಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications