ಕೊರೊನಾ ಭೀತಿ: ಬಂದ್ ಆಯ್ತು ಮೂಡಿಗೆರೆ ದೇವರಮನೆ ಗುಡ್ಡ
ಚಿಕ್ಕಮಗಳೂರು, ಜುಲೈ 4: ಒಂದು ಕಡೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ, ಮತ್ತೊಂದು ಕಡೆ ಜನರ ನಿರ್ಲಕ್ಷಾ ಕೂಡ ಮುಂದುವರೆದಿದೆ. ಹೀಗಾಗಿ, ಮೂಡಿಗೆರೆ ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ಆಗಮನಕ್ಕೆ ನಿರ್ಬಂಧ ಹೇರಲಾಗಿದೆ.
Recommended Video
ಕೊರೊನಾದಿಂದ ಶಾಲೆ ಕಾಲೇಜುಗಳು ಪ್ರಾರಂಭವಾಗಿಲ್ಲ. ಅನೇಕ ಆಫೀಸ್ಗಳಿಗೆ ರಜೆ ನೀಡಲಾಗಿದೆ. ಆದರೆ, ಸೋಂಕು ಹರಡುತ್ತಿರುವ ಸಮಯದಲ್ಲಿ ಜನರು ಮನೆಯಲ್ಲಿ ಇರದೇ ಪ್ರವಾಸಕ್ಕೆ ಬರುತ್ತಿದ್ದಾರೆ. ಇದರಿಂದ ಮೂಡಿಗೆರೆ ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಕಡಿವಾಣ ಹಾಕಲು ಕಾರಣವಾಗಿದೆ.
ಬೇರೆ ಬೇರೆ ಜಿಲ್ಲೆಗಳಿಂದ ಜನರು ಬರುತ್ತಿದ್ದು, ಸೊಂಕು ಹರಡುವ ಸಾಧ್ಯತೆ ಹೆಚ್ಚಿದೆ. ಪ್ರವಾಸಕ್ಕೆ ಬರುವ ಅನೇಕರು ಕೊರೊನಾ ಸುರಕ್ಷತ ಕ್ರಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೆ ಓಡಾಡುತ್ತಿದ್ದಾರೆ.

ಮೋಜು ಮಸ್ತಿಗಾಗಿ ಬರುವ ಜನರು ಎಲ್ಲ ಬೇಕೆಂದರಲ್ಲಿ ಕಾರು ನಿಲ್ಲಿಸಿಕೊಂಡು ನೃತ್ಯ ಮಾಡುವುದು. ಬಾಟಲಿ, ಪ್ಲಾಸ್ಟಿಕ್ ಎಸೆಯುವುದು, ಸ್ವಚ್ಚತೆ ಕಾಪಾಡದೆ ಇರುವುದು ಕಂಡು ಬಂದಿದೆ. ಸ್ಥಳೀಯರ ರಕ್ಷಣೆಯ ದೃಷ್ಠಿಯಿಂದ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ.












Click it and Unblock the Notifications