ಶಕ್ತಿ ದೇವತೆ ಮೊರೆ ಹೋದ ಡಿ.ಕೆ ಶಿವಕುಮಾರ್: ಶೃಂಗೇರಿಯಲ್ಲಿ ಇಂದು ಚಂಡಿಕಾ ಯಾಗ
ಶೃಂಗೇರಿ, ಏಪ್ರಿಲ್ 23: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ತಮ್ಮದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶೃಂಗೇರಿ ಶಾರದಾಂಬೆಯ ಮೊರೆ ಹೋಗಿದ್ದಾರೆ.
ಶನಿವಾರ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್, ನಿನ್ನೆ ಸಂಜೆ ಶೃಂಗೇರಿ ಶಾರದಾಂಬೆಯ ಸನ್ನಿಧಿಯಲ್ಲಿ ಪತ್ನಿಯೊಂದಿಗೆ ಚಂಡಿಕಾ ಯಾಗದ ಸಂಕಲ್ಪ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಆಪ್ತ ಕ್ಯಾತ ಜ್ಯೋತಿಷಿ ದ್ವಾರಕನಾಥ್ ನೇತೃತ್ವದಲ್ಲಿ ಇಂದು( ಏಪ್ರಿಲ್ 23)ರಂದು ಶಾರದಾಂಬೆಯ ಸನ್ನಿಧಿಯಲ್ಲಿ ಚಂಡಿಕಾಯಾಗ ನಡೆಯಲಿದೆ.

ಭಾನುವಾರ ಬೆಳಗ್ಗೆ ಆರಂಭವಾಗಲಿರುವ ಚಂಡಿಕಾಯಾಗ ಮಧ್ಯಾಹ್ನ 12 ಗಂಟೆವರೆಗೂ ನಡೆಯಲಿದ್ದು, ಪೂರ್ಣಾಹುತಿಯೊಂದಿಗೆ ಚಂಡಿಕಾ ಯಾಗ ಪೂರ್ಣಗೊಳ್ಳಲಿದೆ. ಈಗಾಗಲೇ ಡಿ.ಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ಯಾಗ ಶಾಲೆಗೆ ಬಂದಿದ್ದು, ಚಂಡಿಕಾ ಯಾಗದಲ್ಲಿ ಭಾಗಿಯಾಗಿದ್ದಾರೆ.
ಸುಮಾರು ಹತ್ತಕ್ಕೂ ಹೆಚ್ಚು ಋತ್ವಿಜರು ಹಾಗೂ ಪುರೋಹಿತರನ್ನು ಒಳಗೊಂಡ ತಂಡ ಶೃಂಗೇರಿ ಕ್ಷೇತ್ರದಲ್ಲಿ ಚಂಡಿಕಾಯಾಗ ನಡೆಸಲಿದ್ದಾರೆ. ಇಂದು ಮಧ್ಯಾಹ್ನದವರೆಗೂ ಶೃಂಗೇರಿಯಲ್ಲೇ ಇರಲಿರುವ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಚುನಾವಣಾ ಪ್ರಚಾರ ಆರಂಭಕ್ಕೂ ಮುನ್ನ ಹೋಮ ಹವನಗಳನ್ನು ಹಾಗೂ ವಿಶೇಷ ಶಾರದಾಂಬೆಗೆ ಪೂಜೆಗಳನ್ನು ನೆರವೇರಿಸಲಿದ್ದಾರೆ.

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದು, " ಎಲ್ಲಾ ತೊಂದರೆಗಳನ್ನು ನಿವಾರಣೆ ಮಾಡುವಂತೆ ದೇವರ ಬಳಿ ಬಂದಿದ್ದೇನೆ. ನನ್ನ ಈ ಚುನಾವಣಾ ಪ್ರಚಾರ ಈ ಕ್ಷೇತ್ರದಿಂದಲೇ ಆರಂಭವಾಗುತ್ತದೆ, ಈ ಕ್ಷೇತ್ರದಲ್ಲಿ ಯಾರು ಏನು ಬೇಕಾದರೂ ಪ್ರಾರ್ಥನೆ ಮಾಡಿಕೊಳ್ಳಬಹುದು. ರಾಜೀವ್ ಗಾಂಧಿ ಕೂಡ ಇಲ್ಲಿ ದೊಡ್ಡ ಹೋಮ ಹಾಗೂ ಯಾಗ ನಡೆಸಿದ ಇತಿಹಾಸ ಇದೆ. ಕನಕಪುರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ. ಪ್ರತಿ ಮನೆಯಲ್ಲೂ ಡಿಕೆ ಶಿವಕುಮಾರ್ ಇದ್ದಾನೆ ಅವರೇ ಅಭ್ಯರ್ಥಿಗಳು. ಅವರೇ ಚುನಾವಣೆ ಮಾಡಿಕೊಳ್ಳುತ್ತಾರೆ. ಸದ್ಯ ನಾನು ನಾಮಪತ್ರವನ್ನ ಸಲ್ಲಿಸಿದ್ದೇನೆ ಅಷ್ಟೇ, ಉಳಿದಿದ್ದೆಲ್ಲವೂ ಅವರೇ ಮಾಡುತ್ತಾರೆ" ಎಂದು ತಮ್ಮ ಗೆಲುವಿ ವಿಶ್ವಾಸ ವ್ಯಕ್ತಪಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications