ತೇಜಸ್ವಿ ಈ ಕೃತಿಯಿಂದ ಕನ್ನಡ ಸಾಹಿತ್ಯಕ್ಕೆ ಸಂಚಲನ: ಡಾ. ಸಂಪತ್
ಕೊಟ್ಟಿಗೆಹಾರ, ಜುಲೈ 8: ಕೊಟ್ಟಿಗೆಹಾರದ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ಇತ್ತೀಚಿನ ತೇಜಸ್ವಿ ಓದು ಮತ್ತು ಮನೆಮನೆಗೆ ತೇಜಸ್ವಿ ಕಾರ್ಯಕ್ರಮದಲ್ಲಿ ಲೇಖಕ, ಕನ್ನಡ ಉಪನ್ಯಾಸಕ ಡಾ. ಸಂಪತ್ ಬೆಟ್ಟಗೆರೆ ಪಾಲ್ಗೊಂಡಿದ್ದರು.
ಕನ್ನಡ ಸಾಹಿತ್ಯಕ್ಕೆ ಸಂಚಲನ ಉಂಟು ಮಾಡಿದ ಕೃತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ''ವ್ಯಕ್ತಿ ವಿಶಿಷ್ಟ ಸಿದ್ಧಾಂತ'' ಎಂದು ಲೇಖಕ, ಕನ್ನಡ ಉಪನ್ಯಾಸಕ ಡಾ. ಸಂಪತ್ ಬೆಟ್ಟಗೆರೆ ಹೇಳಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ವ್ಯಕ್ತಿ ವಿಶಿಷ್ಟ ಸಿದ್ಧಾಂತ ಮತ್ತು ಯಮಳ ಪ್ರಶ್ನೆ ಕೃತಿಯ ಬಗ್ಗೆ ಅವರು ಮಾತನಾಡಿದರು.

''ವ್ಯಕ್ತಿ ವಿಶಿಷ್ಟ ಸಿದ್ಧಾಂತ ಕೃತಿಯ ನಾಲ್ಕು ಅಧ್ಯಾಯಗಳಲ್ಲಿ ತನ್ನನ್ನು ಹೇಗೆ ರೂಪಿಸಿಕೊಳ್ಳಬೇಕು, ತನ್ನ ಸಾಹಿತ್ಯದ ಚಟುವಟಿಕೆಗಳು ಹೇಗೆ ಇರಬೇಕು ಎನ್ನುವುದನ್ನು ತೇಜಸ್ವಿಯವರು ವಿವರಿಸಿದ್ದಾರೆ. ಒಂದು ವಿಚಾರದ ಕೃತಿಯಾಗಿ ವ್ಯಕ್ತಿ ವಿಶಿಷ್ಟ ಸಿದ್ಧಾಂತ ಒಂದು ಕಲಾಕೃತಿಯ ದೃಷ್ಟಿಯಲ್ಲಿ ಯಮಳ ಪ್ರಶ್ನೆ ಒಂದಕೊಂದು ಪೂರಕವಾಗಿದೆ,'' ಎಂದರು.
''ವ್ಯಕ್ತಿ ವಿಶಿಷ್ಟ ಸಿದ್ಧಾಂತ ಕೃತಿಯನ್ನು ಬರಹದ ಮೂಲಕವಾಗಲಿ ಮಾತಿನ ಮೂಲಕವಾಗಲಿ ಹೆಚ್ಚು ಚರ್ಚೆಗೆ ಒಳಪಡಿಸಿಲ್ಲ. ವ್ಯಕ್ತಿ ವಿಶಿಷ್ಟ ಸಿದ್ಧಾಂತ ಕೃತಿಯನ್ನು ಚರ್ಚೆ ಮಾಡುವುದಕ್ಕಿಂತಲೂ ಮುಖ್ಯವಾಗಿ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಒಬ್ಬ ಓದುಗ ಈ ಕೃತಿಯನ್ನು ಚನ್ನಾಗಿ ಓದಿ ಅರ್ಥ ಮಾಡಿಕೊಂಡು ಆ ಮೂಲಕ ತನ್ನ ಸಾಹಿತ್ಯವನ್ನು ಸೃಜಿಸಿರಬಹುದು ಎನ್ನುವುದು ಕೂಡ ಮುಖ್ಯವಾಗುತ್ತದೆ,'' ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್, ತಾಂತ್ರಿಕ ವಿಭಾಗದ ನವದೀಪ್, ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್ ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications