ನೀವು ಶೃಂಗೇರಿಗೆ ಹೊರಟಿದ್ದೀರಾ? ನಿಮ್ಮ ಬ್ಯಾಗ್ ಒಮ್ಮೆ ಚೆಕ್ ಮಾಡಿಕೊಳ್ಳಿ? ಏಕಂದ್ರೆ....
ರಾಜ್ಯದ ಹಲವು ದೇವಾಯಲಗಳಲ್ಲಿ ಈಗಾಗಲೇ ವಸ್ತ್ರ ಸಂಹಿತಿಯನ್ನು ಅಳವಡಿಸಿಲಾಗಿದೆ. ಈ ಪಟ್ಟಿಗೆ ಸದ್ದಿಲ್ಲದೆ ಶೃಂಗೇರಿ ಶಾರದಾ ಪೀಠ ಸಹ ಸೇರಲಿದೆ. ಇನ್ನು ಮುಂದೆ ನೀವು ಏನಾದ್ರೂ ಶಾರದಾಂಬೆಯ ದರ್ಶನಕ್ಕೆ ಹೋಗುವುದಾದರೆ, ದೇವಸ್ಥಾನ ಮಂಡಳಿ ಸೂಚಿಸಿರುವ ಡ್ರೆಸ್ಗಳನ್ನು ತೆಗೆದುಕೊಂಡ ಹೋಗ ಬೇಕು ಇಲ್ಲಾ ಅಂದರೆ ನಿಮಗೆ ಒಳಗೂ ಬಿಡುವುದಿಲ್ಲ.
ಒಂದು ವೇಳೆ ನೀವು ಶಾರಾದಾಂಬೆಯ ದರ್ಶನಕ್ಕೆ ಎಂದು ಲಘು ಬಗೆಯಿಂದ ಹೊರಟ್ಟಿದ್ದರೆ, ದಯವಿಟ್ಟು ಒಂದು ಕ್ಷಣ ನಿಲ್ಲಿ. ಒಂದು ಬಾರಿ ನಿಮ್ಮ ಬ್ಯಾಗ್ಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸೂಚಿಸಿರುವ ಡ್ರೆಸ್ಗಳು ಇವೆಯಾ ಎಂದು ಚೆಕ್ ಮಾಡಿಕೊಳ್ಳಿ. ಇಲ್ಲಾ ಅಂದ್ರೆ ದೇವರ ದರ್ಶನ ಇನ್ನು ಕಷ್ಟ. ಏಕಂದರೆ ಶೃಂಗೇರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ಜಾರಿ ಆಗಿದೆ.

ಇದೇ ಆಗಸ್ಟ್ 15 ರಿಂದ ಜಾರಿಗೆ ಬರುವಂತೆ ಶೃಂಗೇರಿ ಆಡಳಿತ ಮಂಡಳಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಭಾರತೀಯ ಸಾಂಪ್ರದಾಯಿಕ ಶೈಲಿಯ ಉಡುಗೆಯನ್ನು ತೊಟ್ಟು ಬಂದವರಿಗೆ ದೇವಸ್ಥಾನದಲ್ಲಿ ಎಂಟ್ರಿ ನೀಡಲಾಗುತ್ತದೆ. ದೇವಸ್ಥಾನಕ್ಕೆ ಹೋಗುವ ಪುರುಷ ಭಕ್ತರು ಇನ್ನು ಮುಂದೆ ಧೋತಿ ಅಥವಾ ಶಲ್ಯ, ಲುಂಗಿ ಅಥವಾ ಉತ್ತರಾಣಿಯನ್ನು ಧರಿಸಿರ ಬೇಕು.
ಮಹಿಳೆಯರು ಸೀರೆ-ರವಿಕೆ, ಸಲ್ದಾರ್ ಜೊತೆಗೆ ದುಪಟ್ಟಾ, ಲಂಗಾ ದಾವಣಿ ತೊಟ್ಟು ಬರುವುದು ಕಡ್ಡಾಯವಾಗಿದೆ ಎಂದು ಶೃಂಗೇರುಯ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ಅರ್ಧಮಂಟಪರ ಒಳಗೆ ಪ್ರವೇಶವಿರುವುದಿಲ್ಲ. ಹೋರಗಿನ ಪ್ರಾಕಾರದಿಂದಲೇ ದೇವರ ದರ್ಶನ್ವನ್ನು ಪಡೆಯಬೇಕಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ಬೆಂಗಳೂರಿನಲ್ಲಿ ಜಾರಿ
ಇದಕ್ಕೂ ಮುನ್ನ ಬೆಂಗಳೂರಿನ ಹಲವು ದೇವಾಲಯಗಳಲ್ಲಿ ಈ ವರ್ಷ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದಿರುವುದು ವಿಶೇಷವಾಗಿದೆ. ಇನ್ನು ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ತರಬೇಕು ಎಂದು ಇದೇ ವರ್ಷ ಜನವರಿಯಲ್ಲಿ ಒಂದು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು, ಟ್ರಸ್ಟಿಗಳು ಈ ನಿಯಮ ಜಾರಿಗೆ ತರಲು ಒತ್ತಾಯಿಸಿದ್ದರು. ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗೆ ಹೋಗುವಂತಿಲ್ಲ. ಈಗಾಗಲೇ ಈ ಭಾಗದಲ್ಲಿ ಈ ವಸ್ತ್ರ ಸಂಹಿತಿ ಜಾರಿಯಲ್ಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications