ಕುಡಿದ ಮತ್ತಿನಲ್ಲಿ ಪುಂಡಾಟ: ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ದೌರ್ಜನ್ಯ
ಚಿಕ್ಕಮಗಳೂರು, ಜೂನ್ 24: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ರಸ್ತೆ ಬದಿಯಲ್ಲಿ ಕನ್ನಡಕಗಳನ್ನು ಮಾರಾಟ ಮಾಡುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಸಾವಿರಾರು ರೂಪಾಯಿ ಬೆಲೆಯ ನೂರಾರು ಕನ್ನಡಕಗಳನ್ನು ಒಡೆದು ಹಾಕಿ ಪಾರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರುವ ಕೋಟೆ ಬಡಾವಣೆಯ ಹೆದ್ದಾರಿ ಬದಿಯಲ್ಲಿ ಅನೇಕ ವರ್ಷಗಳಿಂದ ಮಹಿಳೆಯೊಬ್ಬರು ಕೂಲಿಂಗ್ ಗ್ಲಾಸ್, ಟೋಪಿಗಳನ್ನು ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶುಕ್ರವಾರ ಸಂಜೆ ಕುಡಿದ ಮತ್ತಿನಲ್ಲಿ ಬೈಕ್ನಲ್ಲಿ ಆಗಮಿಸಿದ ಇಬ್ಬರು ಯುವಕರು ಮಹಿಳೆಯ ಬಳಿ ಬಂದು ಕನ್ನಡಕಗಳನ್ನು ಖರೀದಿ ಮಾಡಿದ್ದಾರೆ.

ಕನ್ನಡಕ ಖರೀದಿ ಮಾಡಿದ ಬಳಿಕ ಯುವಕರು ಮಹಿಳೆಯೊಂದಿಗೆ ಚೌಕಾಸಿ ಮಾಡಿದ್ದು, ಮಹಿಳೆಯ ಕಡಿಮೆ ಬೆಲೆಗೆ ಕನ್ನಡಕ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಯುವಕರು ಮಹಿಳೆಗೆ ನಿಂದಿಸಿದ್ದಲ್ಲದೇ ಮಾರಾಟಕ್ಕಿಟ್ಟಿದ್ದ ಎಲ್ಲಾ ಕನ್ನಡಗಳನ್ನು ರಸ್ತೆಗೆ ಎಸೆದು ಪುಡಿಪುಡಿ ಮಾಡಿದ್ದಾರೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕರ ಪುಂಡಾಟ ತಡೆಯಲು ಮುಂದಾದರೂ ಕುಡಿದ ಮತ್ತಿನಲ್ಲಿದ್ದ ಯುವಕರು ಯಾರ ಮಾತು ಕೇಳದೇ ಸಾವಿರಾರು ರೂಪಾಯಿ ಬೆಲೆಯ ಕನ್ನಡಕಗಳನ್ನು ರಸ್ತೆಗೆ ಎಸೆದು ಪುಡಿ ಮಾಡಿದ್ದಾರೆ. ಕೆಲ ಸಾರ್ವಜನಿಕರು ಯುವಕರ ಪುಂಡಾಟವನ್ನು ಪ್ರಶ್ನಿಸುತ್ತಿದ್ದಂತೆ ಯುವಕರು ಬೈಕ್ ಹತ್ತಿ ಪರಾರಿಯಾಗಿದ್ದಾರೆ.

ಘಟನೆಯನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಘಟನೆಯ ವಿಡಿಯೋಗಳು ವೈರಲ್ ಆಗಿವೆ. ಪುಂಡಾಟ ಮಾಡಿ ಬಡ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆಯಿಂದ ಸಾವಿರಾರು ರೂಪಾಯಿ ನಷ್ಟ ಅನುಭವಿಸಿರುವ ಮಹಿಳೆ ಕಣ್ಣೀರು ಹಾಕಿದ್ದು, ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications