ಕಡೂರಿನಲ್ಲಿ ವಿದ್ಯುತ್ ತಂತಿ ತುಳಿದು ಆನೆ ಸಾವು
ಚಿಕ್ಕಮಗಳೂರು, ಡಿಸೆಂಬರ್ 3: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 60 ವರ್ಷದ ಗಂಡಾನೆ ಸಾವನ್ನಪ್ಪಿದೆ. ಕಡೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜೋಳದ ಜಮೀನಿಗೆ ವಿದ್ಯುತ್ ತಂತಿಯನ್ನು ಅಳವಡಿಸಲಾಗಿತ್ತು. ಇಂದು ನಾಡಿಗೆ ಬಂದಿದ್ದ ಆನೆ ಈ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸಾವನ್ನಪ್ಪಿದೆ.
ಬಂಡೀಪುರದಲ್ಲಿ ರೈಲ್ವೆ ಕಂಬಿ ಹತ್ತಲು ಕಾಡಾನೆ ಸರ್ಕಸ್!
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
Comments
English summary
Elephant died by electric shock while coming in search of food in kadur of chikkamagaluru,
Story first published: Tuesday, December 3, 2019, 17:57 [IST]