ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ, ಅರಣ್ಯ ಇಲಾಖೆ ವಿರುದ್ಧ ಜನಾಕ್ರೋಶ
ಚಿಕ್ಕಮಗಳೂರು, ಡಿಸೆಂಬರ್, 25: ಕಾಡಾನೆ ದಾಳಿಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ರಾಗಿ ಫಸಲು ಕಾಯುತ್ತಾ ಜಮೀನಿನ ಗುಡಿಸಲಿನಲ್ಲಿ ಮಲಗಿದ್ದ ರೈತನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಮಲಗಿದ್ದ ರೈತನನ್ನು ಕಾಲಿನಲ್ಲಿ ತುಳಿದು ಸಾಯಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮಪಂಚಾಯತಿ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ನಿರ್ಲಕ್ಷ್ಯ, ರೈತನ ಜೀವ ತೆಗೆದ ಕಾಡಾನೆ
ಈರಪ್ಪ (60) ಕಾಡಾನೆ ದಾಳಿಯಿಂದ ಮೃತಪಟ್ಟ ರೈತರಾಗಿದ್ದಾರೆ. ರೈತ ಈರಪ್ಪ ತಮ್ಮ ಹೊಲದಲ್ಲಿ ಬೆಳೆದಿದ್ದ ರಾಗಿ ಫಸಲನ್ನು ಕಾವಲು ಕಾಯುತ್ತಿದ್ದರು. ಅವರು ಕಾಡುಪ್ರಾಣಿಗಳಿಂದ ರಾಗಿ ಬೆಳೆಯನ್ನು ರಕ್ಷಿಸಿಕೊಳ್ಳಲು ರಾತ್ರಿ ಇಡೀ ಜಮೀನಿನ ಗುಡಿಸಲಿನಲ್ಲಿ ಮಲಗಿದ್ದರು. ಆದರೆ ಭಾನುವಾರ ಮುಂಜಾನೆ ಗುಡಿಸಲಿನ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಿದೆ. ನಂತರ ಕಾಡಾನೆ ಗುಡಿಸಲು ಧ್ವಂಸ ಮಾಡಿ ರೈತ ಈರಪ್ಪನನ್ನು ಅಡಿಕೆ ತೋಟದವರೆಗೂ ಎಳೆದುತಂದು ತುಳಿದು ಸಾಯಿಸಿದೆ.
ಅರಣ್ಯ ಇಲಾಖೆ ವಿರುದ್ದ ರೊಚ್ಚಿಗೆದ್ದ ಜನ
ಘಟನೆ ಸಂಭವಿಸಿದ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರ್ಘಟನೆ ಸಂಭವಿಸಿದರೂ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಕೆಂಡಕಾರಿದರು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಈ ಬಾರಿ ಕಾಡಾನೆಗಳ ದಾಳಿ ತೀವ್ರವಾಗಿ ಹೆಚ್ಚಿದ್ದು, ಮೂಡಿಗೆರೆ ತಾಲೂಕು ಒಂದರಲ್ಲೇ ಈವರೆಗೂ ಕಾಡಾನೆ ದಾಳಿಗೆ 6 ಮಂದಿ ಬಲಿಯಾಗಿದ್ದಾರೆ. ಮಲೆನಾಡಿನಲ್ಲಿ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಬಯಲು ಭಾಗದಲ್ಲೂ ಕಾಡಾನೆಗಳ ದಾಳಿ ಆರಂಭವಾಗಿರುವುದು ರೈತರ ನಿದ್ದೆಗೆಡಿಸಿದೆ. ಭಾನುವಾರ ಕಾಡಾನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ. ಹಾಗೂ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು, ರೈತರು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ಕಾಡಾನೆಗಳ ದಾಳಿ
ಅಲ್ಲದೇ ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮತ್ತೆ ಕಾಡಾನೆಗಳ ದಾಳಿ ಮುಂದುವರೆದಿದೆ. ಕಾಡಾನೆಗಳ ದಾಳಿಯಿಂದ ಇಲ್ಲಿನ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಹಗಲು, ರಾತ್ರಿ ವೇಳೆ ಗುಮ್ಮನಹಳ್ಳಿ ಗ್ರಾಮದೊಳಗೆ ಕಾಡಾನೆಗಳು ದಾಳಿ ಮಾಡುತ್ತಲೇ ಇವೆ. ರೈತರು ಬೆಳೆದಿದ್ದ ಬೆಳೆಗಳನ್ನು ನಾಶ ಮಾಡುವುದಲ್ಲದೆ, ಮಾನವನ ಮೇಲೂ ದಾಳಿ ನಡೆಸಿದ ಹಲವು ಉದಾಹರಣೆಗಳಿವೆ. ಹೀಗೆ ಸತತವಾಗಿ ಕಾಡಾನೆಗಳ ದಾಳಿಯಿಂದ ಇಲ್ಲಿನ ಜನರು ಬೇಸತ್ತು ಹೋಗಿದ್ದಾರೆ. ಕಳೆದ ರಾತ್ರಿ ಸಕಲೇಶಪುರ ತಾಲೂಕಿನ ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಆಗಮಿಸಿದೆ. ನಂತರ ಕಾಡಾನೆಯನ್ನು ಹಿಂಬಾಲಿಸಿದ ಟಾಸ್ಕ್ ಫೋರ್ಸ್ ಸಿಬ್ಬಂದಿ, ಗ್ರಾಮಸ್ಥರಿಗೆ ಮನೆಯಿಂದ ಹೊರಬಾರದಂತೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಕಾಲ ಕಾಡಾನೆಗಳ ಹಾವಳಿ ಕಡಿಮೆ ಆಗಿತ್ತು. ಆಗಿನಿಂದ ಗ್ರಾಮಸ್ಥರು ನಿರ್ಭಯವಾಗಿ ಮನೆಯಿಂದ ಹೊರಬರಲು ಆರಂಭಿಸಿದ್ದರು. ಹಾಗೆಯೇ ಜಮೀನು ಕೆಲಸದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಆದರೆ ನಿನ್ನೆ ಮತ್ತೆ ಕಾಡಾನೆ ಗುಮ್ಮನಹಳ್ಳಿ ಗ್ರಾಮದೊಳಗೆ ಹಾದು ಹೋದ ಕಾರಣ ಸ್ಥಳೀಯರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications