ಬೆಳ್ಳಂಬೆಳಿಗ್ಗೆ ಮೂಡಿಗೆರೆಯಲ್ಲಿ ರಾಜಾರೋಷವಾಗಿ ಓಡಾಡಿ ಆತಂಕ ತಂದ ಆನೆ
ಚಿಕ್ಕಮಗಳೂರು, ಅಕ್ಟೋಬರ್ 31: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮತ್ತೆ ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿವೆ.
ಇಂದು ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು ಮೂಡಿಗೆರೆಯ ಕುಂಬರಡಿ ಗ್ರಾಮದಲ್ಲಿ ರಾಜಾರೋಷವಾಗಿ ಓಡಾಟ ನಡೆಸಿದೆ. ಮೂರು ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿತ್ತು. ಮೂಡಿಗೆರೆ ಉಪವಲಯ ಅರಣ್ಯಾಧಿಕಾರಿ ಚೇತನ್ ಎಂಬುವವರು ದಾಳಿಯಿಂದ ಪಾರಾಗಿದ್ದರು, ಅವರ ಕಾಲಿಗೆ ಗಂಭೀರವಾಗಿ ಪೆಟ್ಟಾಗಿತ್ತು.

ಇದೀಗ ಮತ್ತೆ ಆನೆಗಳು ಸುಳಿದಾಡುತ್ತಿರುವುದು ಆತಂಕವನ್ನು ಹೆಚ್ಚಿಸಿವೆ. ಕಡಿದಾದ ತೋಟಗಳ ನಡುವೆ ಆನೆಗಳು ಓಡಾಡುತ್ತಿವೆ. ಕಳೆದ ಕೆಲವು ದಿನಗಳಿಂದ ಕುಂಬರಡಿ, ಗೌಡಳ್ಳಿ, ಬೈರಾಪುರ ಗ್ರಾಮಗಳಲ್ಲಿ ಕಾಡಾನೆಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಈ ರೀತಿ ಆನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಹೊರಗೆ ಬರಲೂ ಹೆದರುವಂತಾಗಿದೆ.












Click it and Unblock the Notifications