ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ: ಅಕ್ರಮ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಇಲಾಖೆ ನೋಟೀಸ್
ಚಿಕ್ಕಮಗಳೂರು ಸೆಪ್ಟೆಂಬರ್ 10: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆಯಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದ ಆನೆ ಕಂಡು ವಾಹನ ಸವಾರರು ಆತಂಕಗೊಂಡಿದ್ದಾರೆ. ನಿತ್ಯ ರಸ್ತೆ ಬದಿ ಕತ್ತಲಲ್ಲಿ ಆನೆ ನಿಂತಿರುವುದನ್ನು ಕಂಡು ಪ್ರಯಾಣಿಕರು ಆತಂಕದಲ್ಲಿ ಪ್ರಯಾಣಿಸುವಂತಾಗಿದೆ.
ಹೌದು... ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಆನೆಗಳು ಸರ್ವೇ ಸಾಮಾನ್ಯವಾಗಿವೆ. ಆದರೆ ಕತ್ತಲಲ್ಲಿ ಏಕಾಏಕಿ ರಸ್ತೆಯ ಮೇಲೆ ಆನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರಲ್ಲಿ ಅಪಘಾತದ ಆತಂಕ ಶುರುವಾಗಿದೆ. ಆನೆಗಳು ರಸ್ತೆಯ ತಿರುವಿನಲ್ಲಿ ನಿಂತುಕೊಳ್ಳುತ್ತವೆ. ಇದರಿಂದಾಗಿ ವಾಹನ ಸವಾರರಿಗೆ ರಸ್ತೆ ಕಾಣದೆ ವಾಹನ ಸಂಚಾರ ಮಾಡಲು ಕಷ್ಟವಾಗಿದೆ. ಇದರಿಂದ ರಸ್ತೆ ದಾಟುವುದು ಕಷ್ಟವಾಗಿದೆ ಎಂದು ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನಗಳ ಸಮೀಪವೇ ಆನೆಯ ಓಡಾಟದ ದೃಶ್ಯ ವೈರಲ್ ಆಗಿದೆ. ಆದರೆ ಅದೃಷ್ಟವಶಾತ್ ಆನೆ ಯಾರಿಗೂ ಕೂಡ ತೊಂದರೆಯನ್ನು ನೀಡಲ್ಲ. ಕಾಡಾನೆ ಕಂಡು ವಾಹನಗಳನ್ನ ನಿಲ್ಲಿಸಿ ನಿಧಾನವಾಗಿ ವಾಹನಗಳು ಮುಂದೆ ಸಾಗಿವೆ. ಘಾಟ್ನ ತಿರುವಿನಲ್ಲಿ ರಾತ್ರಿ ಏಕಾಏಕಿ ಆನೆ ಕಾಣಿಸಿಕೊಂಡಿದ್ದು ಕಳೆದ ಮೂರ್ನಾಲ್ಕು ತಿಂಗಳಿಂದಲೂ ಆನೆಗಳು ನಡು ರಸ್ತೆಯಲ್ಲಿ ಕಾಣಿಸಿಕೊಳ್ತಿದೆ. ಇದರಿಂದ ಪ್ರಯಾಣಿಕರು ಅಪಘಾತದ ಆತಂಕ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ಹಂಪ್ಸ್ನಲ್ಲಿ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ
ಹಂಪ್ಸ್ನಲ್ಲಿ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ಹೌಸಿಂಗ್ ಬೋರ್ಡ್ ಸಮೀಪ ಸಾಲುಮರದ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಗಾಯಳುಗಳನ್ನ ಹಾಸನ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಂಪ್ಸ್ ಕಾಣಿಸದೇ ಟಾಟಾಏಸ್ ವಾಹನ ಏಕಾಏಕಿ ಚಲಾಯಿಸಿದಾಗ ನಿಯಂತ್ರಣ ತಪ್ಪಿದೆ. ಇದರಿಂದ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನದಲ್ಲಿ ಇದ್ದ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಳುಗಳನ್ನ ಖಾಸಗಿ ವಾಹನದಲ್ಲಿ ಸ್ಥಳೀಯರು ಸಾಗಿಸಿದ್ದ, ಕರೆಗೆ ಸ್ಪಂದಿಸದೆ ತಕ್ಷಣ ಸ್ಥಳಕ್ಕೆ ಬಾರದ ಪೊಲೀಸರ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ಅರಣ್ಯ ಇಲಾಖೆ ಹೈ ಅಲರ್ಟ್
ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಖಡಕ್ ಆದೇಶದ ಬೆನ್ನಲ್ಲೆ ಚಿಕ್ಕಮಗಳೂರಿನಲ್ಲಿ ಅರಣ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಅರಣ್ಯ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯ ಜನರಿಗೆ ನೋಟೀಸ್ ನೀಡಲಾಗಿದೆ. ಅರಣ್ಯ ವ್ಯಾಪ್ತಿಯ ಒಳಗೆ ರೆಸಾರ್ಟ್, ಹೋಂ ಸ್ಟೇ ನಿರ್ಮಾಣದ ಬಗ್ಗೆ ಸಂಶಯಗೊಂಡು ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಅರಣ್ಯ ಇಲಾಖೆಯಿಂದ ನೋಟೀಸ್ ನೀಡಲಾಗಿದೆ.

ಸೂಕ್ತ ದಾಖಲೆಗಳನ್ನು ಹಾಜರುಪಡಿಸುವಂತೆ ಅರಣ್ಯ ಇಲಾಖೆ 40 ಜನ ರೆಸಾರ್ಟ್, ಹೋಂಸ್ಟೇ ಮಾಲೀಕರಿಗೆ ನೋಟಿಸ್ ನೀಡಲಿದೆ. ಮೂಡಿಗೆರೆ, ಮುತ್ತೋಡಿ, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ಭಾಗದ ರೆಸಾರ್ಟ್, ಹೋಂಸ್ಟೇ ಮಾಲೀಕರಿಗೆ ಸಚಿವರ ಆದೇಶದನ್ವಯ ಅರಣ್ಯ ಇಲಾಖೆ ನೋಟಿಸ್ ನೀಡಿದೆ. ಚಿಕ್ಕಮಗಳೂರು ಡಿ.ಎಫ್.ಓ ರಮೇಶ್ ಬಾಬುರಿಂದ ಒಂದು ವಾರದ ಒಳಗೆ ಸೂಕ್ತ ದಾಖಲೆ ನೀಡುವಂತೆ ನೋಟೀಸ್ ನೀಡಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications