ತರೀಕೆರೆ ತಾಲೂಕಿನಲ್ಲಿ ಮತ್ತೆ ಮುಂದುವರೆದ ಕಾಡಾನೆಗಳ ಹಾವಳಿ: ಕಂಗಾಲಾದ ಹಳ್ಳಿಗಾಡಿನ ಜನರು
ಚಿಕ್ಕಮಗಳೂರು, ಡಿಸೆಂಬರ್, 18: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ತಕ್ಕಮಟ್ಟಿಗೆ ಕಡಿಮೆ ಆಯ್ತು ಎಂದು ಜನರು ನಿಟ್ಟುಸಿ ಬಿಡುತ್ತಿದ್ದರು. ಆದರೆ ಇದೇ ವೇಳೆಗೆ ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸುತ್ತಮುತ್ತ ಕಾಡಾನೆಗಳ ಹಿಂಡು ಬೀಡು ಬಿಟ್ಟಿರುವುದು ಸ್ಥಳೀಯರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.
ತರೀಕೆರೆ ತಾಲೂಕಿನ ಲಿಂಗದಹಳ್ಳಿ, ಭೈರಾಪುರ, ನಂದಿಬಂಟ್ಲು, ಮಲ್ಲಿಗೇನಹಳ್ಳಿ ಸೇರಿದಂತೆ ಸುತ್ತಮುತ್ತ ಕಾಡಾನೆಗಳ ಹಿಂಡು ಆಗಮಿಸುತ್ತಲೇ ಇವೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಹಿಂಡು ಓಡಾಡಿರುವುದರಿಂದ ಜನ ಹೊಲ, ಗದ್ದೆ, ತೋಟಗಳಿಗೆ ಹೋಗುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಇಗೀಗ ಅಡಿಕೆ ಕೊಯ್ಲಿನ ಸಮಯವಾಗಿದೆ. ಆದರೆ ಕಾಡಾನೆಗಳ ಕಾಟದಿಂದ ಬೆಳೆಗಾರರು, ಕೂಲಿ ಕಾರ್ಮಿಕರು ಕೂಡ ತೋಟಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಕಾಡಾನೆಗಳ ಹಾವಳಿಗೆ ಜನರು ಕಂಗಾಲು
ಕಾಡಾನೆಗಳು ಹಿಂಡು ಕುಟುಂಬ ಸಮೇತ ಬಂದು ಬೀಡು ಬೀಡುತ್ತಿವೆ. ಎಷ್ಟು ಸಾರಿ ಓಡಿಸಿದರೂ ಕೂಡ ಮತ್ತ ಅದೇ ಸ್ಥಳಕ್ಕೆ ಬಂದು ನೆಲೆಯೂರುತ್ತಿವೆ. ಹೀಗೆ ಕಾಡಾನೆಗಳ ಹಾವಳಿಗೆ ಇಲ್ಲಿನ ಜನರು ಹೈರಾಣಾಗಿದ್ದಾರೆ. ಸಂಜೆ ನಾಲ್ಕು-ಐದು ಗಂಟೆ ಆಗುತ್ತಿದ್ದಂತೆ ಹೊಲ, ಗದ್ದೆ, ತೋಟಗಳಿಗೆ ಕಾಡಾನೆಗಳು ಜಮೀನುಗಳಿಗೆ ನುಗ್ಗಿಬಿಡುತ್ತಿವೆ. ಅಲ್ಲದೇ ಜಮೀನುಗಳಲ್ಲಿ ರಾಜರೋಷವಾಗಿ ಓಡಾಡುತ್ತಾ ಬೆಳೆಗಳನ್ನೆಲ್ಲ ನಾಶ ಮಾಡುತ್ತಿವೆ.

ಕಳೆದ ನಾಲ್ಕೈದು ದಿನದಿಂದ ಸುಮಾರು ಎಂಟು ಕಾಡಾನೆಗಳು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಓಡಾಡುತ್ತಿವೆ. ಇಲ್ಲಿ ಅರಣ್ಯಕ್ಕೆ ಸಮೀಪ ಇರುವ ಉಡೇವ ಗ್ರಾಮದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಯಾವುದೇ ಪರ್ಯಾಯ ದಾರಿಯಿಲ್ಲದೆ ಇಲ್ಲಿನ ಸ್ಥಳೀಯರು ಆನೆ ಕಂಡಾಗ ಪಟಾಕಿ ಸಿಡಿಸುತ್ತಾರೆ. ಆಗ ಕಾಡಾನೆಗಳು ಬೇರೆ ಕಡೆ ಅಥವಾ ಕಾಡಿನಲ್ಲಿ ಮರೆಯಾಗುತ್ತವೆ. ನಂತರ ಮರುದಿನ ಮತ್ತದೇ ಜಾಗಕ್ಕೆ ಬಂದು ನೆಲೆಯೂರುತ್ತಿವೆ.

ಜಮೀನಿನಲ್ಲೇ ನೆಲೆಯೂರುತ್ತಿವೆ ಕಾಡಾನೆಗಳು
ಸಂಜೆ ಆಗುತ್ತಿದ್ದಂತೆ ಜಮೀನಿನಲ್ಲೇ ಕಾಡಾನೆಗಳ ಹಿಂಡು ಬೀಡು ಬಿಟ್ಟಿರುತ್ತವೆ. ಇದರಿಂದ ಏಳೆಂಟು ಹಳ್ಳಿಯ ಜನ ಕಳೆದೊಂದು ವಾರದಿಂದ ಹೈರಾಣಾಗಿದ್ದಾರೆ. ಅರಣ್ಯದ ಅಂಚಿನ ಗ್ರಾಮಗಳಾಗಿರುವುದರಿಂದ ಆನೆ ಹಾವಳಿ ಮಿತಿ ಮೀರುತ್ತಿದೆ. ಹಾಗಾಗಿ, ಅರಣ್ಯ ಇಲಾಖೆ ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕು. ಈ ಮೂಲಕ ಕಾಡಾನೆಗಳ ಹಾವಳಿಯಿಂದ ಮುಕ್ತಿ ಕೊಡಿಸಿ ಎನ್ನುವುದು ಸ್ಥಳೀಯರು ಆಗ್ರಹಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications