ಶಿವಮೊಗ್ಗ ಲೋಕಸಭೆ ಉಪಚುನಾವಣೆ: ಟಿಕೆಟ್ ಗೊಂದಲಕ್ಕೆ ತೆರೆ ಎಳೆದ ಈಶ್ವರ್ ಖಂಡ್ರೆ

ಚಿಕ್ಕಮಗಳೂರು, ಅಕ್ಟೋಬರ್.14: ಅಂತೂ ಶಿವಮೊಗ್ಗ ಲೋಕಸಭೆ ಉಪಚುನಾವಣೆ ಟಿಕೆಟ್ ಗೊಂದಲ ವಿಚಾರಕ್ಕೆ ಭಾಗಶಃ ತೆರೆಬಿದ್ದಿದೆ. ಹೌದು, ಇದೀಗ ಟಿಕೆಟ್ ಗೊಂದಲಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತೆರೆ ಎಳೆದಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದ್ದು, ವರಿಷ್ಟರ ಜೊತೆ ಚರ್ಚಿಸಿ ಇಂದು ಭಾನುವಾರ (ಅ.14) ಸಂಜೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ.

ಈ ವಿಚಾರವನ್ನು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿ.ವೈ ರಾಘವೇಂದ್ರ ಸ್ಪರ್ಧಿಸುವುದು ಖಚಿತವಾಗಿದೆ.

Eshwar Khandre spoke about Shimoga Lok Sabha by-election ticket

ಆದರೆ, ಕಾಂಗ್ರೆಸ್ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಅಂತಿಮವಾಗಿರಲಿಲ್ಲ. ಹೀಗಾಗಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಕುತೂಹಲವಿತ್ತು. ಆದರೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಸಾಧ್ಯತೆ ಇರುವುದರಿಂದ ಸದ್ಯದ ಗೊಂದಲಕ್ಕೆ ತಡೆಯೊಡ್ಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+