ಚಿಕ್ಕಮಗಳೂರಿನಲ್ಲಿ ಸಮಾನ ಮನಸ್ಕರಿಂದ ಉಪವಾಸ ಸತ್ಯಾಗ್ರಹ
ಚಿಕ್ಕಮಗಳೂರು, ಏಪ್ರಿಲ್ 10: ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತಾ ಸೇರಿದಂತೆ ಸಮಾನ ಮನಸ್ಕರಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಚಿಕ್ಕಮಗಳೂರಿನ ಶಂಕರಪುರದ ದಲಿತ ಮಹಿಳೆ ಸಾವಿತ್ರಮ್ಮ ಎಂಬವರು ಮನೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ನಿರ್ಗತಿಕರು, ಬಡವರು, ವಲಸಿಗರು ಊಟವಿಲ್ಲದೆ ಉಪವಾಸ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ.
ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ಸಾರಲು ಈಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆಯಿಂದ ಆರಂಭವಾಗಿರುವ ಉಪವಾಸ ಸತ್ಯಾಗ್ರಹ ಸಂಜೆ 6 ಕ್ಕೆ ಸಂಪನ್ನಗೊಳ್ಳಲಿದೆ.
""ದೇಶದಲ್ಲಿ ಇಂದು ಬಡಜನರು ಹಸಿವಿನಿಂದ ಸಾಯುತ್ತಿದ್ದಾರೆ. ಈ ಸ್ಥಿತಿಗೆ ನಾವು ಕೂಡ ಪಾಲುದಾರರಾಗಿದ್ದೇವೆ, ಮತ್ತು ಪಶ್ಚಾತಾಪ, ಪ್ರಾಯಶ್ಚಿತದ ಫಲವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ'' ಎಂದು ವೈಎಸ್ ವಿ ದತ್ತಾ ಹೇಳಿದರು.
ಆಡಳಿತ ನಡೆಸುವ ಸರ್ಕಾರಗಳನ್ನು ಎಚ್ಚರಿಸುವ ಸಲುವಾಗಿಯೂ ಸತ್ಯಾಗ್ರಹ ನಡೆಯುತ್ತಿದ್ದು, ವೈಎಸ್ ವಿ ದತ್ತಾ ಅವರಿಗೆ ಸಾಥ್ ನೀಡಿರುವ ಮಾಜಿ ಶಾಸಕ ಬಿ.ಬಿ ನಿಂಗಯ್ಯ , ಜೆಡಿಎಸ್, ಸಿಪಿಐ, ಬಿಎಸ್ ಪಿ ಮುಖಂಡರು ಈ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ನೀಡಿದ್ದಾರೆ.