ಸಂಕಷ್ಟದಲ್ಲಿದ್ದ ಗುರುಗಳಿಗೆ ಹಳೇ ವಿದ್ಯಾರ್ಥಿಗಳಿಂದ ಆರ್ಥಿಕ ಸಹಾಯ
ಚಿಕ್ಕಮಗಳೂರು, ಸೆಪ್ಟೆಂಬರ್ 6: ತಾವು ಓದಿ ಬೆಳೆದು, ಉನ್ನತ ಹುದ್ದೆಗೇರಿದ ವಿದ್ಯಾರ್ಥಿಗಳು ತಮ್ಮ ಗುರು ವೃಂದ ಸಂಕಷ್ಟದಲ್ಲಿದೆ ಎಂದು ತಿಳಿದು ಹಳೇ ವಿದ್ಯಾರ್ಥಿಗಳು ಶಿಕ್ಷಕರಿಗೆ ಚಿಕ್ಕಮಗಳೂರಿನಲ್ಲಿ ಆರ್ಥಿಕ ಸಹಾಯ ಮಾಡಿದ್ದಾರೆ.
Recommended Video
ಸೆಪ್ಟೆಂಬರ್ 5 ರಂದು ಶಿಕ್ಷಕ ದಿನಾಚರಣೆಯ ಅಂಗವಾಗಿ 20 ಶಿಕ್ಷಕರಿಗೆ ತಲಾ ಮೂರು ಸಾವಿರ ಬರುವಂತೆ 60 ಸಾವಿರ ರುಪಾಯಿ ಹಣ ನೀಡಿರುವ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ ನಡೆದಿದೆ.
ಕಡೂರಿನ ಬ್ರೈಟ್ ಫ್ಯೂಚರ್ ಇಂಗ್ಲೀಷ್ ಶಾಲೆಯ ಹಳೇ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಕೊರೊನಾ ವೈರಸ್ ಕಾಲದಲ್ಲಿ ಕಳೆದ ಐದಾರು ತಿಂಗಳಿಂದ ಖಾಸಗಿ ಶಾಲೆಯ ಶಿಕ್ಷಕರು ತೀವ್ರ ಸಂಕಷ್ಟದಲ್ಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಕೂಡ ಶಿಕ್ಷಕರಿಗೆ ಅರ್ಧ ಸಂಬಳ ನೀಡಿತ್ತು. ಹಾಗಾಗಿ, ಹಳೇ ವಿದ್ಯಾರ್ಥಿಗಳು ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಈ ಶಾಲೆಯಲ್ಲಿ ಓದಿದ್ದ ವಿದ್ಯಾರ್ಥಿಗಳು ಅಮೆರಿಕಾ, ಜರ್ಮನಿಯಲ್ಲಿದ್ದಾರೆ. ಕೆಲವರು ವೈದ್ಯರು, ಎಂಜಿನಿಯರ್ ಸಹ ಆಗಿದ್ದಾರೆ.

ಉತ್ತಮ ಸ್ಥಾನದಲ್ಲಿರುವ ಸುಮಾರು 30 ವಿದ್ಯಾರ್ಥಿಗಳು ಹಣ ಹಾಕಿ ಶಿಕ್ಷಕರ ನೆರವಿಗೆ ಬಂದಿದ್ದಾರೆ. ಇದೇ ವೇಳೆ ಶಾಲೆಯ ಬೋಧಕೇತರ ವರ್ಗದ 18 ಜನರಿಗೂ ಒಂದು ತಿಂಗಳ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ. ವಿದ್ಯಾರ್ಥಿಗಳ ಪ್ರೀತಿ ಹಾಗೂ ಗೌರವಕ್ಕೆ ಆಡಳಿತ ಮಂಡಳಿ, ಶಿಕ್ಷಕ ವೃಂದ ಕೂಡ ಶ್ಲಾಘಿಸಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications