ಚಾರ್ಮಾಡಿ ಘಾಟ್ನಲ್ಲಿ ಕಿಡಿಗೇಡಿಗಳ ಕೃತ್ಯ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ
ಚಿಕ್ಕಮಗಳೂರು, ಡಿಸೆಂಬರ್ 28: ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಬಾಳೂರು ಮೀಸಲು ಅರಣ್ಯದ ಸೋಮನಕಾಡು ಎಂಬಲ್ಲಿ ಕಾಡ್ಗಿಚ್ಚು ಉಂಟಾದ ಪರಿಣಾಮ ನೂರಾರು ಎಕರೆಯಷ್ಟು ಕಾಡು, ಕಾಡುಪ್ರಾಣಿಗಳು ಬೆಂಕಿಗಾಹುತಿಯಾಗಿದೆ.
ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಸೋಮನಕಾಡು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿದ್ದು, ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ದಟ್ಟಕಾನನವಾದ ಕಾರಣ ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಅರಣ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ನೂರಾರು ಜಾತಿಯ ಸಾವಿರಾರು ಮರಗಿಡಗಳು, ಪ್ರಾಣಿ-ಪಕ್ಷಿಗಳು ಕೂಡ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

ಹತ್ತಾರು ಅರಣ್ಯ ಅಧಿಕಾರಿಗಳ ನಿರಂತರ ಶ್ರಮದಿಂದ ಅಧಿಕಾರಿಗಳು ಬೆಂಕಿ ಆರಿಸಿದ್ದಾರೆ. ಉಪವಲಯ ಅರಣ್ಯ ಅಧಿಕಾರಿ ಬಸವರಾಜು, ಅರಣ್ಯ ರಕ್ಷಕ ಪರಮೇಶ್, ಅರಣ್ಯ ವೀಕ್ಷಕ ದಿನೇಶ್ ಸೇರಿದಂತೆ ಹತ್ತಾರು ಅರಣ್ಯ ಇಲಾಖೆ ನೌಕರರು ಬೆಂಕಿಯನ್ನ ನಂದಿಸಿದ್ದಾರೆ. ಕಾಡನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಾಕಷ್ಟು ಮುಂಜಾಗೃತ ಕ್ರಮಗಳನ್ನ ಕೈಗೊಂಡರೂ ಕೂಡ ಕೆಲ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಕೊಡುತ್ತಿರುವುದರಿಂದ ಅಪರೂಪದ ಪ್ರಕೃತಿ ಸಂಪತ್ತು ನಾಶವಾಗುತ್ತಿದೆ.

ಚಾರ್ಮಾಡಿ ಅಪರೂಪದ ಸಸ್ಯ ಸಂಪತ್ತಿನ ಬೆಟ್ಟಗುಡ್ಡ. ಮಳೆಗಾಲದಲ್ಲಿ ಹಚ್ಚಹಸುರಿನಿಂದ ಕಂಗೊಳಿಸುವ ಇಲ್ಲಿನ ಬೆಟ್ಟಗುಡ್ಡಗಳು ಬೇಸಿಗೆಯಲ್ಲಿ ಒಣಗಿ ನಿಂತಿರುತ್ತದೆ. ಈ ಮಾರ್ಗದಲ್ಲಿ ಓಡಾಡುವ ಕೆಲ ಪ್ರವಾಸಿಗರು ಸಿಗರೇಟ್ ಸೇದಿ ಎಸೆಯುವ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರುವ ಉದಾಹರಣೆಯೂ ಇದೆ. ಹಾಗಾಗಿ, ಎಲ್ಲರೂ ಕೂಡ ಕಾಡನ್ನು ಉಳಿಸಿ-ಬೆಳೆಸುವುದು ಎಲ್ಲರ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications