ಪ್ರಥಮ ಜಾನಪದ ಸಮ್ಮೇಳನಕ್ಕೆ ಸಜ್ಜಾಗಿದೆ ಚಿಕ್ಕಮಗಳೂರು
ಚಿಕ್ಕಮಗಳೂರು, ನವೆಂಬರ್ 15: ಕನ್ನಡ ಜಾನಪದ ಪರಿಷತ್ ವತಿಯಿಂದ ನಡೆಸಲಾಗುವ ಚಿಕ್ಕಮಗಳೂರು ಜಿಲ್ಲಾ ಘಟಕದ ಪ್ರಥಮ ಜಾನಪದ ಸಮ್ಮೇಳನವು ನಾಳೆ ಚೌಳಹಿರಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ.
ನವೆಂಬರ್ 16, ಶನಿವಾರದಂದು ನಡೆಯಲಿರುವ ಈ ಸಮ್ಮೇಳನದ ಅಧ್ಯಕ್ಷತೆಯನ್ನು ಮಾಳೇನಹಳ್ಳಿ ಬಸಪ್ಪ ಅವರು ವಹಿಸಿಕೊಳ್ಳಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಜಾನಪದ ಕಲಾತಂಡ ಮತ್ತು ಪೂರ್ಣಕುಂಭದೊಂದಿಗೆ ಕಾರ್ಯಕ್ರಮದ ಮೆರವಣಿಗೆ ನಡೆಯಲಿದೆ. ಚೌಳಹಿರಿಯೂರು ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿರುವ ಶ್ರೀಮತಿ ವನಮಾಲ ದೇವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ, ಪರಿಷತ್ತು ಧ್ವಜಾರೋಹಣ ಮತ್ತು ನಾಡ ಧ್ವಜಾರೋಹಣ ಕಾರ್ಯಕ್ರಮವೂ ನಡೆಯಲಿದೆ.

ಎಲೆಮರೆಕಾಯಿಯಂತಿರುವ ಜಾನಪದ ಕಲಾವಿದರನ್ನು ಗುರಿತಿಸಿ, ಆ ಮೂಲಕ ಕಲೆಯನ್ನು ಉಳಿಸಿ, ಬೆಳೆಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದ್ದು, ಕಲಾವಿದರಿಗೆ, ವಿದ್ವಾಂಸರಿಗೆ ಜಾನಪದ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಹಲವು ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕೊಪ್ಪ ತಾಲೂಕಿನ ಖ್ಯಾತ ಬಡಗುತಿಟ್ಟು ಮದ್ದಳೆಗಾರ ಭಾಗವತರ ಮನೆ ವೆಂಕಟೇಶ್, ಚಟ್ನಳ್ಳಿ ಮಹೇಶ್, ಬೆಳವಾಡಿ ಮಂಜುನಾಥ್ ಅವರನ್ನು ಗೌರವಿಸಲಾಗುತ್ತದೆ. ಅಜ್ಜಂಪುರ, ಚಿಕ್ಕಮಗಳೂರು, ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ತರೀಕೆರೆ, ಮೂಡಿಗೆರೆ, ಕಡೂರು ಭಾಗದಲ್ಲಿರುವ ಪ್ರಮುಖ ಜಾನಪದ ಕಲಾವಿದರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications