ಚಿಕ್ಕಮಗಳೂರು: ದತ್ತಪೀಠದಲ್ಲಿ ಮುಡಿ ಕೊಟ್ಟ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ
ಚಿಕ್ಕಮಗಳೂರು, ಡಿಸೆಂಬರ್, 29: ಚಿಕ್ಕಮಗಳೂರಿನ ದತ್ತಪೀಠ ಇತ್ತೀಚಿನ ದಿನಗಳಲ್ಲಿ ಒಂದೊಂದೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. 30 ವರ್ಷಗಳ ಹೋರಾಟದ ಫಲವಾಗಿ ಇತ್ತೀಚೆಗಷ್ಟೇ ಹಿಂದೂ ಅರ್ಚಕರ ನೇಮಕವಾಗಿದ್ದು, ಹೋರಾಟಕ್ಕೆ ಸಿಕ್ಕ ಫಲವಾಗಿತ್ತು. ಇದೀಗ ದತ್ತಪೀಠ ಆವರಣ ಮತ್ತೊಂದು ಸುವರ್ಣ ಘಳಿಗೆಗೆ ಸಾಕ್ಷಿಯಾಗಿದೆ.
ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠದ ಉಮೇದುವಾರಿಕೆಗಾಗಿ ದಶಕಗಳಿಂದಲೂ ಹಿಂದೂ-ಮುಸ್ಲಿಮರು ಹೋರಾಡುತ್ತಿದ್ದಾರೆ. ಆದರೆ ಹಿಂದೂಗಳು ಮುಸ್ಲಿಮರ ದರ್ಗಾ ಇರುವುದು ನಾಗೇನಹಳ್ಳಿಯಲ್ಲಿ, ಅಲ್ಲಿಗೆ ಹೋಗಿ ಇದು ಹಿಂದೂಗಳ ಪೀಠ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಕಳೆದ ಮೂರು ವರ್ಷಗಳಿಂದ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು ಎಂದು ಆಗ್ರಹಿಸಿದ್ದರು.
ಮುಡಿ ಕೊಟ್ಟ ಗಂಗಾಧರ್ ಕುಲಕರ್ಣಿ
ಜಿಲ್ಲಾಡಳಿತ ದತ್ತ ಮೂರ್ತಿಯನ್ನು ಶೋಭಾಯಾತ್ರೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಬೇಕೆಂದು ಹರಕೆ ಹೊತ್ತು ಮೂರು ವರ್ಷದಿಂದ ಕಟ್ಟಿಂಗ್-ಶೇವಿಂಗ್ ಮಾಡಿಸಿರಲಿಲ್ಲ. ತಮ್ಮ ಹೋರಾಟ ಹಾಗೂ ಹರಕೆಗೆ ಫಲ ಸಿಕ್ಕ ಹಿನ್ನೆಲೆ ಇದೀಗ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ದತ್ತಪೀಠದ ಹೋಮದ ಆವರಣದಲ್ಲಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠ ಆಗುವವರೆಗೂ ನಾವು ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.

ದತ್ತಪೀಠದಲ್ಲಿ ಮುಡಿ ಕಾರ್ಯಕ್ರಮ
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮುಡಿ ಕಾರ್ಯಕ್ರಮ ನಡೆದಿದ್ದು, ಪ್ರಮೋದ್ ಮುತಾಲಿಕ್ ಕೂಡ ಮುಸ್ಲಿಮರ ವಿರುದ್ಧ ಕಿಡಿಕಾರಿದ್ದಾರೆ. ಗಂಗಾಧರ್ ಹಿಂದೂಗಳಿಗೆ ಹಿತವಾಗಬೇಕು. ದತ್ತಪೀಠ ಹಿಂದೂಗಳ ಪೀಠವಾಗಬೇಕೆಂದು ಈ ಸಂಕಲ್ಪ ಮಾಡಿದ್ದಾರೆ. ಶಾಸ್ತ್ರೋಕ್ರವಾಗಿ ಮುಡಿ ಕಾರ್ಯಕ್ರಮ ನಡೆದಿದೆ. ಮುಂದಿನ ದಿನಗಳಲ್ಲೂ ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠವಾಗಲಿದೆ ಎಂದರು. ಧಾರ್ಮಿಕ ದತ್ತಿ ಇಲಾಖೆ ಕಾನೂನಿನ ಪ್ರಕಾರ, ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ-ಕ್ರಿಶ್ಚಿಯನ್ಗಳಿಗೆ ಪ್ರವೇಶವೇ ಇಲ್ಲ, ಟೆಂಡರ್ ಕೊಡುವಂತಿಲ್ಲ. ಮಾರಾಟಕ್ಕೆ ಅವಕಾಶ ನೀಡುವಂತಿಲ್ಲ. ಮಕ್ಕಳಾಗದವರು, ಯಾವುದೇ ರೀತಿಯ ರೋಗ-ರುಜನೆ ಇದ್ದವರು, ಹಣದ ತೊಂದರೆ ಇದ್ದವರು ದತ್ತಪೀಠಕ್ಕೆ ಬಂದು ಮುಡಿ ಕೊಟ್ಟರೆ ನಿಮ್ಮ ಸಮಸ್ಯೆ ಪವಾಡದ ರೀತಿ ಪರಿಹಾರವಾಗುತ್ತದೆ ಎಂದರು.

ಒಟ್ಟಾರೆ, 30 ವರ್ಷಗಳ ಹೋರಾಟದ ಫಲವಾಗಿ ದತ್ತಪೀಠಕ್ಕೆ ಅಲ್ಪ ನ್ಯಾಯ ಸಿಕ್ಕಿದೆ. ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠವಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಅನ್ನುವುದು ಹಿಂದೂ ಸಂಘಟನೆಗಳ ವಾದವಾಗಿದೆ. ಆದರೆ ದತ್ತಪೀಠದಲ್ಲಿ ಇದೀಗ ಮತ್ತೆ ಹೊಸ ಸಂಪ್ರದಾಯ ಆರಂಭವಾಗಿದ್ದು, ಸಾಂಕೇತಿಕವಾಗಿ ಒಬ್ಬರು ಮುಡಿ ನೀಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications