ಚಿಕ್ಕಮಗಳೂರು: ದತ್ತಪೀಠದಲ್ಲಿ ಮುಡಿ ಕೊಟ್ಟ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ
ಚಿಕ್ಕಮಗಳೂರು, ಡಿಸೆಂಬರ್, 29: ಚಿಕ್ಕಮಗಳೂರಿನ ದತ್ತಪೀಠ ಇತ್ತೀಚಿನ ದಿನಗಳಲ್ಲಿ ಒಂದೊಂದೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. 30 ವರ್ಷಗಳ ಹೋರಾಟದ ಫಲವಾಗಿ ಇತ್ತೀಚೆಗಷ್ಟೇ ಹಿಂದೂ ಅರ್ಚಕರ ನೇಮಕವಾಗಿದ್ದು, ಹೋರಾಟಕ್ಕೆ ಸಿಕ್ಕ ಫಲವಾಗಿತ್ತು. ಇದೀಗ ದತ್ತಪೀಠ ಆವರಣ ಮತ್ತೊಂದು ಸುವರ್ಣ ಘಳಿಗೆಗೆ ಸಾಕ್ಷಿಯಾಗಿದೆ.
ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠದ ಉಮೇದುವಾರಿಕೆಗಾಗಿ ದಶಕಗಳಿಂದಲೂ ಹಿಂದೂ-ಮುಸ್ಲಿಮರು ಹೋರಾಡುತ್ತಿದ್ದಾರೆ. ಆದರೆ ಹಿಂದೂಗಳು ಮುಸ್ಲಿಮರ ದರ್ಗಾ ಇರುವುದು ನಾಗೇನಹಳ್ಳಿಯಲ್ಲಿ, ಅಲ್ಲಿಗೆ ಹೋಗಿ ಇದು ಹಿಂದೂಗಳ ಪೀಠ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಕಳೆದ ಮೂರು ವರ್ಷಗಳಿಂದ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಬೇಕು ಎಂದು ಆಗ್ರಹಿಸಿದ್ದರು.
ಮುಡಿ ಕೊಟ್ಟ ಗಂಗಾಧರ್ ಕುಲಕರ್ಣಿ
ಜಿಲ್ಲಾಡಳಿತ ದತ್ತ ಮೂರ್ತಿಯನ್ನು ಶೋಭಾಯಾತ್ರೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಬೇಕೆಂದು ಹರಕೆ ಹೊತ್ತು ಮೂರು ವರ್ಷದಿಂದ ಕಟ್ಟಿಂಗ್-ಶೇವಿಂಗ್ ಮಾಡಿಸಿರಲಿಲ್ಲ. ತಮ್ಮ ಹೋರಾಟ ಹಾಗೂ ಹರಕೆಗೆ ಫಲ ಸಿಕ್ಕ ಹಿನ್ನೆಲೆ ಇದೀಗ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ದತ್ತಪೀಠದ ಹೋಮದ ಆವರಣದಲ್ಲಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠ ಆಗುವವರೆಗೂ ನಾವು ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.

ದತ್ತಪೀಠದಲ್ಲಿ ಮುಡಿ ಕಾರ್ಯಕ್ರಮ
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮುಡಿ ಕಾರ್ಯಕ್ರಮ ನಡೆದಿದ್ದು, ಪ್ರಮೋದ್ ಮುತಾಲಿಕ್ ಕೂಡ ಮುಸ್ಲಿಮರ ವಿರುದ್ಧ ಕಿಡಿಕಾರಿದ್ದಾರೆ. ಗಂಗಾಧರ್ ಹಿಂದೂಗಳಿಗೆ ಹಿತವಾಗಬೇಕು. ದತ್ತಪೀಠ ಹಿಂದೂಗಳ ಪೀಠವಾಗಬೇಕೆಂದು ಈ ಸಂಕಲ್ಪ ಮಾಡಿದ್ದಾರೆ. ಶಾಸ್ತ್ರೋಕ್ರವಾಗಿ ಮುಡಿ ಕಾರ್ಯಕ್ರಮ ನಡೆದಿದೆ. ಮುಂದಿನ ದಿನಗಳಲ್ಲೂ ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠವಾಗಲಿದೆ ಎಂದರು. ಧಾರ್ಮಿಕ ದತ್ತಿ ಇಲಾಖೆ ಕಾನೂನಿನ ಪ್ರಕಾರ, ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ-ಕ್ರಿಶ್ಚಿಯನ್ಗಳಿಗೆ ಪ್ರವೇಶವೇ ಇಲ್ಲ, ಟೆಂಡರ್ ಕೊಡುವಂತಿಲ್ಲ. ಮಾರಾಟಕ್ಕೆ ಅವಕಾಶ ನೀಡುವಂತಿಲ್ಲ. ಮಕ್ಕಳಾಗದವರು, ಯಾವುದೇ ರೀತಿಯ ರೋಗ-ರುಜನೆ ಇದ್ದವರು, ಹಣದ ತೊಂದರೆ ಇದ್ದವರು ದತ್ತಪೀಠಕ್ಕೆ ಬಂದು ಮುಡಿ ಕೊಟ್ಟರೆ ನಿಮ್ಮ ಸಮಸ್ಯೆ ಪವಾಡದ ರೀತಿ ಪರಿಹಾರವಾಗುತ್ತದೆ ಎಂದರು.

ಒಟ್ಟಾರೆ, 30 ವರ್ಷಗಳ ಹೋರಾಟದ ಫಲವಾಗಿ ದತ್ತಪೀಠಕ್ಕೆ ಅಲ್ಪ ನ್ಯಾಯ ಸಿಕ್ಕಿದೆ. ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠವಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಅನ್ನುವುದು ಹಿಂದೂ ಸಂಘಟನೆಗಳ ವಾದವಾಗಿದೆ. ಆದರೆ ದತ್ತಪೀಠದಲ್ಲಿ ಇದೀಗ ಮತ್ತೆ ಹೊಸ ಸಂಪ್ರದಾಯ ಆರಂಭವಾಗಿದ್ದು, ಸಾಂಕೇತಿಕವಾಗಿ ಒಬ್ಬರು ಮುಡಿ ನೀಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications