ಚಿಕ್ಕಮಗಳೂರಿನಲ್ಲಿ 39 ಲಕ್ಷ ರೂಪಾಯಿ ವೆಚ್ಚದ ಫುಟ್ಪಾತ್ ಅಭಿವೃದ್ಧಿ: ಶಾಸಕ ಸಿ.ಟಿ.ರವಿ
ಚಿಕ್ಕಮಗಳೂರು, ಡಿಸೆಂಬರ್, 10: 39 ಲಕ್ಷ ರೂಪಾಯಿ ವೆಚ್ಚದಲ್ಲಿ ಆಜಾದ್ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎರಡೂ ಬದಿಯಲ್ಲಿ ಫುಟ್ಪಾತ್ ಅಭಿವೃದ್ಧಿ ಕೆಲಸ ಮಾಡಲಾಗುವು ಎಂದು ಶಾಸಕ ಸಿ.ಟಿ.ರವಿ ಹೇಳಿದರು.
ನಗರಸಭೆ ಮುಂಭಾದಲ್ಲಿರುವ ಫುಟ್ಪಾತ್ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ ಅವರು, 39 ಲಕ್ಷದ 50 ಸಾವಿರ ರೂಗಳ ವೆಚ್ಚದಲ್ಲಿ ಆಜಾದ್ ಪಾರ್ಕ್ನಿಂದ ಎಸ್ಪಿ ಕಚೇರಿಯವರೆ ಎರಡು ಬದಿಯ ಫುಟ್ಪಾತ್ ಅಭಿವೃದ್ಧಿಪಡಿಸಿ ಸ್ಟೈನ್ಲೆಸ್ ಸ್ಟೀಲ್ ಬ್ಯಾರಿಕೇಟಿಂಗ್ ಹಾಕುವಂತಹ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಎಂಜಿ ರಸ್ತೆ ಮತ್ತು ಮಾರ್ಕೆಟ್ ರಸ್ತೆಯ ಫುಟ್ಪಾತ್ಗಳನ್ನು ಮರು ಅಭಿವೃದ್ಧಿಕಾರ್ಯ ನಡೆಸಲಾಗುವುದು ಎಂದರು.

ಪಾರ್ಕ್ಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ
ಇನ್ನು ಚಿಕ್ಕಮಗಳೂರನ್ನು ಸ್ವಚ್ಚ ಮತ್ತು ಸುಂದರ ನಗರವನ್ನಾಗಿಸುವುದರ ಜೊತೆಗೆ, ಎಲ್ಲಾ ರೀತಿಯ ಸೌಲಭ್ಯವನ್ನು ಹೊಂದಿರುವ ನಗರವನ್ನಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನವನ್ನು ಮಾಡಲಾಗುತ್ತಿದೆ. ನಗರದ ಪಾರ್ಕ್ಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ಕೆಲಸವನ್ನೂ ಸಹ ಮಾಡಲಾಗುತ್ತಿದೆ. 146 ಪಾರ್ಕ್ಗಳನ್ನು ಗುರುತಿಸಿ ಇ-ಖಾತೆ ಮಾಡಲಾಗುವುದು. ಜೊತೆಗೆ ಒತ್ತುವರಿಯಾದ ಜಾಗದಲ್ಲಿ ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಚಿಕ್ಕಮಗಳೂರು ನಗರದ ನಾಗರೀಕರ ಸಹಕಾರವಿದ್ದರೆ ಜಿಲ್ಲೆಯನ್ನು ಸುಂದರ ಮತ್ತು ಸ್ವಚ್ಚನಗರವನ್ನಾಗಿಸಲು ಸಾದ್ಯವಾಗುತ್ತದೆ ಎಂದು ಮನವಿ ಮಾಡಿದರು.

ಎಲ್ಇಡಿ ದೀಪ ಅಳವಡಿಕೆಗೆ ನಿರ್ಧಾರ
ನಗರಸಭೆಯ ಎಲ್ಲಾ ಸದಸ್ಯರು ಒಂದು ತಂಡವಾಗಿ ನಗರದ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ. ನಗರದ ಅಭಿವೃದ್ಧಿಗಾಗಿ ಪ್ರಸ್ತಾವನೆ ಕಳಿಸುವ ಜವಾಬ್ದಾರಿ ನಿಮ್ಮದು. ಅನುದಾನವನ್ನು ತರುವ ಜವಾಬ್ದಾರಿ ನನ್ನದು. ಕಳೆದ 2 ವರ್ಷಗಳಿಂದ ಇದ್ದ ಬೀದಿ ದೀಪದ ಸಮಸ್ಯೆಯಿಂದ ಹಲವುಬಾರಿ ನಗರಸಭೆಗೆ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಇಡೀ ನಗರಕ್ಕೆ 12 ಸಾವಿರ ಎಲ್ಇಡಿ ದೀಪ ಅಳವಡಿಕೆ ಮಾಡಲು ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ನಾಗಭೂಷಣ್ ಅವರೊಂದಿಗೆ ಚರ್ಚಿಸಿ ಶೀಘ್ರವಾಗಿ ಕೆಲಸವನ್ನು ಪ್ರಾರಂಭಿಸುವಂತೆ ಒತ್ತಾಯ ಮಾಡಲಾಗಿದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications