ಅರಣ್ಯ ಇಲಾಖೆಯಿಂದ ಕಿರುಕುಳ: ತರೀಕೆರೆ ರೈತ ಆತ್ಮಹತ್ಯೆಗೆ ಯತ್ನ
ಚಿಕ್ಕಮಗಳೂರು, ಜೂನ್ 30: ಅರಣ್ಯ ಹಾಗೂ ಕಂದಾಯ ಅಧಿಕಾರಿಗಳು ನಮಗೆ ಉಳುಮೆ ಮಾಡಲು ಬಿಡುತ್ತಿಲ್ಲ ಎಂದು ರೈತನೋರ್ವ ಅರಣ್ಯ ಇಲಾಖೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಕವಳ್ಳಿ ಸಮೀಪದ ಕುಂದೂರು ಗ್ರಾಮದ 50 ವರ್ಷದ ಮಾಗುಂಡ ಆತ್ಮಹತ್ಯೆಗೆ ಯತ್ನಿಸಿದಾತ. ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದೇವೆ, 1998 ರಲ್ಲಿ ಫಾರಂ 53 ರಲ್ಲಿ ಅರ್ಜಿ ಹಾಕಿದ್ದೇವೆ. ಆದರೆ ಉಳುಮೆ ಮಾಡಲು ಬಿಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿ, ವಿಷ ಸೇವಿಸಿ ಬಿದ್ದು ನರಳಾಡಿದ್ದಾರೆ.
ಕೂಡಲೇ ಅಧಿಕಾರಿಗಳು ಹಾಗೂ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳಿಂದ ನಾವು ಇಲ್ಲೇ ಉಳುಮೆ ಮಾಡಿ ಬದುಕುತ್ತಿದ್ದೇವೆ. ಇಲ್ಲಿ ಸುಮಾರು 18 ಎಕರೆ ಜಮೀನಿದ್ದು, ಎಲ್ಲರೂ ಒಂದೂವರೆ, ಎರಡು ಎಕರೆ ಜಮೀನು ಉಳ್ಳವರಾಗಿದ್ದೇವೆ ಎಂದು ಆತ್ಮಹತ್ಯೆಗೆ ಯತ್ನಿಸಿದ ಮಾಗುಂಡ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಆದರೆ, ಅಧಿಕಾರಿಗಳು ನಮಗೆ ಉಳುಮೆ ಮಾಡಲು ಬಿಡುತ್ತಿಲ್ಲ. ಜಮೀನನ್ನು ಕಬಳಿಸಲು ಅಧಿಕಾರಿಗಳ ಮೇಲೆ ಸ್ಥಳೀಯ ರಾಜಕೀಯ ಮುಖಂಡ ಒತ್ತಡವಿದೆ ಎಂದು ಆರೋಪಿಸಿರುವ ಮಾಗುಂಡ ಕುಟುಂಬಸ್ಥರು, ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಸ್ಥಳೀಯವಾಗಿ ಸುತ್ತಮುತ್ತ ನೂರಾರು ಜನ, ಸಾವಿರಾರು ಎಕರೆ ಒತ್ತುವರಿ ಮಾಡಿದ್ದಾರೆ. ಕೆಲವರು ಫಾರಂ 53 ರಡಿ ಅರ್ಜಿ ಹಾಕಿದ್ದಾರೆ. ಆದರೆ, ಅಧಿಕಾರಿಗಳು ನಮಗೆ ಮಾತ್ರ ಹಿಂಸೆ ಕೊಡುತ್ತಿದ್ದಾರೆ. ಬೇರೆ ಯಾರಿಗೂ ಏನನ್ನೂ ಕೇಳುತ್ತಿಲ್ಲ. ನಮಗೆ ಮಾತ್ರ ಈ ರೀತಿ ಮಾಡುತ್ತಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications