ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಕಾಡ್ಗಿಚ್ಚು, ಸಸ್ಯ ಸಂಪತ್ತು ನಾಶ
ಚಿಕ್ಕಮಗಳೂರು, ಫೆಬ್ರವರಿ 11: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನೂರಾರು ಎಕರೆ ಅಪರೂಪದ ಸಸ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಬಿಸಿಲಿನ ತಾಪ ಜೋರಾಗಿದ್ದು ಚಿಕ್ಕಮಗಳೂರಿನ ಪ್ರಮುಖ ಬೆಟ್ಟ ಪ್ರದೇಶವಾದ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ದಟ್ಟವಾದ ಹೊಗೆ ಆವರಿಸಿದ್ದು, ಅಪಾರವಾದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ.
ಬಿಸಿಲಿನ ತಾಪಕ್ಕೆ ಬೆಂಕಿ ಬೇಗ ವ್ಯಾಪಿಸಿದ ಪರಿಣಾಮ ಮುಳ್ಳಯ್ಯನಗಿರಿ ಬೆಟ್ಟ ಧಗಧಗಿಸಿ ಉರಿದಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕದಳ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಸೀತಾಳಯ್ಯನಗಿರಿ ಸಮೀಪ ಗುಡ್ಡ ಹೊತ್ತಿ ಉರಿದಿದೆ. ಬೆಟ್ಟ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಲು ಕಾರ್ಯಾಚರಣೆಯನ್ನು ಕೈಗೊಂಡರು.
ಕಡಿದಾದ ಬೆಟ್ಟ ಪ್ರದೇಶ ಮತ್ತು ದಟ್ಟವಾಗಿ ಆವರಿಸಿದ ಹೊಗೆಯ ಕಾರಣ ಬೆಂಕಿ ನಂದಿಸಲು ಅಗ್ನಿ ಶಾಮಕದಳದ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸಹ ಕೆಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಬೆಟ್ಟದ ಮೇಲಿಂದಲೇ ನೀರನ್ನು ಹಾಕುವ ಮೂಲಕ ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸಿದರು.
ಜೋರಾಗಿ ಗಾಳಿ ಬೀಸುತ್ತಿರುವ ಪರಿಣಾಮ ಬೆಂಕಿ ಬೆಟ್ಟದಲ್ಲಿ ವ್ಯಾಪ್ತಿಸುತ್ತಲೇ ಇದೆ. ಭಾನುವಾರದ ರಜೆಯ ಕಾರಣ ನೂರಾರು ಪ್ರವಾಸಿಗರು ಸಹ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಆಗಮಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನ ನಡೆಯುತ್ತಿದೆ.
ಬೆಟ್ಟ ಪ್ರದೇಶದಿಂದ ಮೇಲಕ್ಕೆ ಹಬ್ಬುತ್ತಿರುವ ಬೆಂಕಿ ಬೆಟ್ಟದ ರಸ್ತೆ ತನಕ ಬಂದಿರುವ ಕಾರಣ ಕೆಲವು ವಾಹನಗಳು ಸಂಚಾರ ನಡೆಸದೇ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ. ಅರಣ್ಯ ಅಧಿಕಾರಿಗಳು ವಾಹನ ಸವಾರರಿಗೆ ಧೈರ್ಯ ತುಂಬಿ ಅಲ್ಲಿಯೇ ನಿಲ್ಲುವಂತೆ ಸಲಹೆ ನೀಡುತ್ತಿದ್ದಾರೆ.
ಕಾಡ್ಗಿಚ್ಚಿನಿಂದಾಗಿ ಯಾವುದೇ ಪ್ರವಾಸಿಗರಿಗೆ ತೊಂದರೆಯಾಗಿಲ್ಲ. ಆದರೆ ಒಣಗಿ ನಿಂತಿರುವ ಸಸ್ಯಗಳು, ಹುಲ್ಲಿನಿಂದಾಗಿ ಬೆಂಕಿ ಬಹು ಬೇಗ ವ್ಯಾಪಿಸುತ್ತಿದ್ದು, ಅದನ್ನು ಹತೋಟಿಗೆ ತರುವುದು ಸವಾಲಿನ ಕೆಲಸವಾಗಿದೆ.
ಹಲವಾರು ಅಪರೂಪದ ಸಸ್ಯಗಳು ಬೆಂಕಿಗೆ ಆಹುತಿಯಾಗಿವೆ. ಹಲವಾರು ಪ್ರಾಣಿಗಳು ಸಹ ಬೆಂಕಿಗೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ. ಬೆಂಕಿಯನ್ನು ಹತೋಟಿಗೆ ತರಲು ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ.
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾಡ್ಗಿಚ್ಚು ಕುರಿತು ಎಚ್ಚರ ವಹಿಸುತ್ತಾರೆ. ಆದರೆ ಕೆಲವು ಸಲ ಅರಣ್ಯಕ್ಕೆ ಬೆಂಕಿ ತಗಲಿ ದೊಡ್ಡ ಅನಾಹುತವಾಗುತ್ತದೆ. ಎಲ್ಲ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ರೇಖೆ ನಿರ್ಮಿಸುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications