ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ತಪ್ಪಲ್ಲ, ಆದ್ರೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ-ಮಾಜಿ ಸಚಿವೆ ಮೋಟಮ್ಮ
ಚಿಕ್ಕಮಗಳೂರು, ಜೂನ್ 1: ಕಾಂಗ್ರೆಸ್ ಪಕ್ಷ ಯಾವಾಗಲೂ ಮಾತಿಗೆ ತಪ್ಪಿಲ್ಲ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಮಾಜಿ ಸಚಿವೆ ಮೋಟಮ್ಮ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾಗಾಂಧಿ ಕಾಲದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡು ಬರುತ್ತಿದೆ, ಬಡವರ ಪರವಾರ 20 ಅಂಶದ ಕಾರ್ಯಕ್ರಮಗಳು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಕೊಟ್ಟ 33% ಮಹಿಳಾ ಮೀಸಲಾತಿ ಸೇರಿದಂತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾ ಬಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 15 ದಿನಗಳಾಗಿವೆ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಪಕ್ಷ ಬದ್ಧವಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಮಾರ್ಗಸೂಚಿಗಳನ್ನು ರೂಪಿಸಬೇಕಾಗಿದೆ ಯಾರಿಗೆ ಈ ಯೋಜನೆಗಳು ಅನ್ವಯವಾಗುತ್ತವೆ ಎಂದು ಮಾನದಂಡಗಳ ಬಗ್ಗೆ ಪರಿಶೀಲಿಸಬೇಕು ಈ ಪ್ರಕ್ರಿಯೆಗಳು ಆರಂಭವಾಗಿದ್ದು, ಜನರಿಗೆ ಯೋಜನೆ ತಲುಪಬೇಕಾದರೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ರಾಜ್ಯದ ಜನರು ತಾಳ್ಮೆಯಿಂದ ಇದ್ದಾರೆ. ಆದರೆ ಬಿಜೆಪಿಯವರು ಜನರನ್ನು ಪ್ರಚೋಧಿಸುವ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹಿಂದೆ ಸರ್ಕಾರ ರಚಿಸಿ ಆಡಳಿತ ನಡೆಸಿರುವಂತ ಹಿರಿಯ ರಾಜಕಾರಣಿಯಾಗಿರುವ ಸಿ.ಟಿ ರವಿ ಅಂತಹವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ದಿಕ್ಕು ತಪ್ಪಿಸುವಂತೆ ಹೇಳಿಕೆ ನೀಡುತ್ತಿರುವುದು ಸಮಂಜಸವಲ್ಲ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ನಡೆಸಿ ಅನಿವಾಸಿ ಭಾರತೀಯರೊಂದಿಗೆ ದೇಶದ ಬಗ್ಗೆ ಹೆಮ್ಮೆಯ ಮಾತನಾಡಿದ್ದಾರೆ. ಆದರೆ ದೇಶದ ಉತ್ತರ ಪ್ರದೇಶ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಬೇಟಿ ಬಚಾವ್ ಬೇಟಿ ಪಡಾವ್ ಎಂಬ ಮೋದಿ ಮಾತು ಇದೇನಾ ಎಂದು ಪ್ರಶ್ನಿಸಿದರು.
ಅಂತರಾಷ್ಟ್ರೀಯ ಕುಸ್ತಿಪಟುಗಳು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿಭಟನೆ ನಡೆಸುತ್ತಾ ತಾವು ಪಡೆದ ಪದಕಗಳನ್ನು ನೀರಿಗೆ ಎಸೆಯುಲು ಮುಂದಾಗಿದ್ದಾ.ರೆ ಈ ಬಗ್ಗೆ ಯಾರು ಚಕಾರವೆತ್ತುತ್ತಿಲ್ಲ ಇದು ಖಂಡನೀಯ ಎಂದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶಭಾನ ಸುಲ್ತಾನ್ ಉಪಸ್ಥಿತರಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications