ಶೃಂಗೇರಿ: ಉಚಿತ ಬಸ್ ಪ್ರಯಾಣ, ಡ್ರೈವರ್ ಸೀಟ್ ಕೂಡ ಬಿಡದ ಮಹಿಳೆ!
ಚಿಕ್ಕಮಗಳೂರು, ಜೂನ್ 18: ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಆರಂಭವಾಗಿ ಮೊದಲ ವೀಕೆಂಡ್ನಲ್ಲಿ ಸಾರಿಗೆ ಬಸ್ಗಳು ತುಂಬಿ ತುಳುಕುತ್ತಿವೆ. ಬಸ್ ಹತ್ತಲು ಹಾಗೂ ಸೀಟ್ಗಳಿಗಾಗಿ ಮಹಿಳೆಯರು ಪರದಾಡುತ್ತಿದ್ದು, ಮಹಿಳೆಯೊಬ್ಬರು ಡ್ರೈವರ್ ಸೀಟ್ನಿಂದಲೇ ಬಸ್ ಹತ್ತಿರುವ ಪ್ರಸಂಗ ಶೃಂಗೇರಿಯಲ್ಲಿ ನಡೆದಿದೆ.
ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಪುಣ್ಯ ಕ್ಷೇತ್ರಗಳಿಗೆ ತೆರಳುವ ಸಾರಿಗೆ ಬಸ್ಗಳು ಫುಲ್ ರಶ್ ಆಗಿದ್ದು, ಸಾವಿರಾರು ಮಹಿಳೆಯರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿದ್ದಾರೆ. ಶೃಂಗೇರಿ ಬಸ್ ನಿಲ್ದಾಣ ಸಂಪೂರ್ಣವಾಗಿ ಮಹಿಳೆಯರಿಂದ ತುಂಬಿದ್ದು, ಸಾರಿಗೆ ಬಸ್ ಹತ್ತಲು ಮಹಿಳೆಯರು ಪರದಾಡುತ್ತಿದ್ದಾರೆ.

ಈ ವೇಳೆ ಮಹಿಳೆಯೊಬ್ಬರು ಡ್ರೈವರ್ ಸೀಟ್ನಿಂದಲೇ ಬಸ್ ಹತ್ತಿದ ಘಟನೆ ನಡೆದಿದೆ. ಮೊದಲು ಮಕ್ಕಳನ್ನು ಡ್ರೈವರ್ ಸೀಟ್ನಲ್ಲಿ ಕೂರಿಸಿದ ಮಹಿಳೆ, ಬಳಿಕ ತಾನೂ ಡ್ರೈವರ್ ಸೀಟ್ನಿಂದಲೇ ಬಸ್ ಏರಿದ್ದಾರೆ.
ಇನ್ನು ಹೊರನಾಡು ಅನ್ನಪೂಣೇಶ್ವರಿ ದರ್ಶನಕ್ಕೂ ಮಹಿಳೆಯರ ದಂಡು ಹೊರಟ್ಟಿದ್ದು, ಧಾರವಾಡ, ಹುಬ್ಬಳ್ಳಿ, ಹರಿಹರ, ಚಿತ್ರದುರ್ಗ, ಹರಿಹರ, ಹಾಸನದಿಂದ ಸುಮಾರು 400ಕ್ಕೂ ಹೆಚ್ಚು ಮಹಿಳೆಯರು ಆಗಮಿಸಿದ್ದಾರೆ. ಕೊಟ್ಟಿಗೆಹಾರದಿಂದ ಹೊರನಾಡಿಗೆ ಹೋಗಲು ಉಚಿತ ಬಸ್ಗಾಗಿ ಮಹಿಳೆಯರು ಇಡೀ ದಿನ ಕಾದಿದ್ದು, ಖಾಸಗಿ ಬಸ್ ಏರಲು ಮಹಿಳೆಯರು ಹಿಂದೇಟು ಹಾಕಿದ್ದಾರೆ.
ಕೊಟ್ಟಿಗೆಹಾರದಿಂದ ಹೊರನಾಡಿಗೆ ಬಸ್ಗಳ ಸಂಖ್ಯೆ ತೀರಾ ಕಡಿಮೆ ಇದೆ. ಉಚಿತ ಬಸ್ಗಾಗಿ ಮಹಿಳೆಯರು ಕಾದಿದ್ದು, ಬಸ್ ನಿಲ್ದಾಣದಲ್ಲಿಯೇ ತಾವು ತಂದ ರೊಟ್ಟಿ, ಚಟ್ನಿ ತಿಂದು ಸಮಯ ಕಳೆಯುತ್ತಿದ್ದಾರೆ. ಸುಮಾರು 400-500 ಮಹಿಳೆಯರು ಬಸ್ ನಿಲ್ದಾಣದಲ್ಲಿಯೇ 100-200 ರೂಪಾಯಿ ಖರ್ಚು ಮಾಡುತ್ತಿದ್ದರೂ, 60-70 ರೂ ಟಿಕೆಟ್ ಹಣ ನೀಡಿ ಖಾಸಗಿ ಬಸ್ನಲ್ಲಿ ಪ್ರಯಾಣಿಸಲು ಹಿಂದೇಟು ಹಾಕಿದ್ದಾರೆ.

ಹೊರನಾಡು ಅನ್ನಪೂಣೇಶ್ವರಿ ದರ್ಶನಕ್ಕೆ ಆಗಮಿಸಿದ ಮಹಿಳೆಯರ ದಂಡು ಸ್ಥಳೀಯ ಪ್ರಯಾಣಿಕರು ದಂಗಾಗಿದ್ದು, ಖಾಸಗಿ ಬಸ್ಗಳನ್ನೇರಿ ಪ್ರಯಾಣ ನಡೆಸಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications