ಪರೀಕ್ಷೆ ಪಾಸ್ ಮಾಡು, ಹುಡ್ಗಿ ಲವ್ ಮಾಡುವಂತೆ ಮಾಡು.. ದೇವರ ಹುಂಡಿಯಲ್ಲಿ ಹೀಗೊಂದು ಲೆಟರ್ ಪತ್ತೆ
ಚಿಕ್ಕಮಗಳೂರು ಸೆಪ್ಟೆಂಬರ್ 20: ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿ ಕೂರಿಸಿದ್ದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 18ರಂದು ವಿಸರ್ಜನೆ ಮಾಡಲಾಯಿತು. ಇಂದು ಆ ದೇವರ ಹುಂಡಿಯಲ್ಲಿನ ಹಣ ಎಣಿಕೆ ಮಾಡುವ ವೇಳೆ ಕೆಲ ಪತ್ರಗಳು ಲಭ್ಯವಾಗಿವೆ. ಈ ಪತ್ರಗಳಲ್ಲಿ ಭಕ್ತರು ಗಣೇಶನಿಗೆ ಹಲವಾರು ಬೇಡಿಕೆಗಳನ್ನು ಇಟ್ಟಿದ್ದು ಕಂಡು ಬಂದಿದೆ. ಗಣೇಶನ ಹುಂಡಿಯಲ್ಲಿ ಸಿಕ್ಕ ಪತ್ರಗಳಲ್ಲಿ ಬರೆದ ವಿಷಯಗಳು ನಿಜಕ್ಕೂ ಅಚ್ಚರಿ ಮೂಡಿಸುವಂತಿವೆ.
'ಪರೀಕ್ಷೆ ಪಾಸ್ ಮಾಡು, ಹುಡ್ಗಿ ಲವ್ ಮಾಡುವಂತೆ ಮಾಡು.. ಸಿ.ಟಿ.ರವಿ ಮುಂದಿನ ಸಿಎಂ ಆಗಬೇಕು.. 'ಎಂಬಿತ್ಯಾದಿ ಬೇಡಿಕೆಗಳನ್ನು ಬರೆದು ಭಕ್ತರು ಗಣಪನ ಹುಂಡಿಗೆ ಹಾಕಿದ್ದಾರೆ. ಅಲ್ಲದೆ 'ಆಸ್ತಿ-ದುಡ್ಡು ಸಿಗುವಂತೆ ಮಾಡು... ಮದುವೆ ಮಾಡು' ಅಂತೆಲ್ಲಾ ಪತ್ರಗಳನ್ನು ಬರೆದು ಗಣೇಶನ ಹುಂಡಿಗೆ ಹಾಕಲಾಗಿದೆ.

ಸಾಮಾನ್ಯವಾಗಿ ದೇವರಿಗೆ ಭಕ್ತರು ಹಲವಾರು ಬೇಡಿಕೆಯನ್ನು ಇಡುತ್ತಾರೆ. ಆದರೆ ಚಿಕ್ಕಮಗಳೂರಿನ ದೇವರ ಹುಂಡಿಯಲ್ಲಿ ಸಿಕ್ಕ ಪತ್ರವೊಂದರಲ್ಲಿ ಬರೆದ ವಿಷಯಗಳು ಅಚ್ಚರಿ ಮೂಡಿಸುವಂತಿವೆ. ಫಾರ್ ದಿ ಫಸ್ಟ್ ಟೈಂ ದೇವರ ಹುಂಡಿಯಲ್ಲಿ ಹಿಂದುತ್ವ, ಹಿಂದೂಗಳ ಬಗ್ಗೆ ಪತ್ರ ಬರೆದಿರುವುದು ಕಂಡು ಬಂದಿದೆ.
ಹೌದು.. ದೇಶಭಕ್ತನೊಬ್ಬ ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಬೇಕು. ದೇಶದ 140 ಕೋಟಿ ಜನರೂ ಹಿಂದೂಗಳಾಗಬೇಕು ಎಂದು ದೇವರಿಗೆ ಪತ್ರ ಬರೆದು ಹುಂಡಿಗೆ ಹಾಕಿದ್ದಾನೆ. ಅಷ್ಟೇ ಅಲ್ಲದೆ ಮತ್ತೊಂದು ಪತ್ರದಲ್ಲಿ ಸಿ.ಟಿ.ರವಿ ಮುಂದಿನ ಸಿಎಂ ಆಗಬೇಕು ಎಂದು ಬರೆಯಲಾಗಿದೆ.

ಸಾಬರ (ಮುಸ್ಲಿಂ) ಈದ್ ಮಿಲಾದ್ ಮೆರವಣಿಗೆಗಿಂತ ಹಿಂದೂಗಳ ಮೆರವಣಿಗೆ ಜೋರಾಗಬೇಕು. ಹಿಂದೂಗಳೆಲ್ಲಾ ಒಗ್ಗಟ್ಟಾಗಿ ಇರಬೇಕು. ದತ್ತಪೀಠ ಆದಷ್ಟು ಬೇಗ ಹಿಂದೂಗಳ ಪೀಠವಾಗಬೇಕು ಎಂದು ಮತ್ತೊಬ್ಬ ಭಕ್ತ ಪತ್ರದ ಮೂಲಕ ದೇವರಿಗೆ ತನ್ನ ಬೇಡಿಕೆ ಇಟ್ಟಿದ್ದಾನೆ. ಮತ್ತೊಂದು ಪತ್ರದಲ್ಲಿ ನನ್ನ ಮಗನಿಗೆ ಮದುವೆ ಮಾಡು, ಮುಂದಿನ ವರ್ಷ ನಿನ್ನ ಸೇವೆ ಮಾಡ್ತೀನಿ ಎಂದು ಹಿಂದೂ ಮಹಾಸಭಾ ಗಣಪತಿಯ ಹುಂಡಿಯಲ್ಲಿ ಸಿಕ್ಕ ಪತ್ರದಲ್ಲಿ ಬರೆಯಲಾಗಿದೆ.
ಇನ್ನೂ ದೇವರ ಹುಂಡಿಯಲ್ಲಿ ಸಿಕ್ಕ ಮತ್ತೊಂದು ಪತ್ರದಲ್ಲಿ ಪರೀಕ್ಷೆ ಪಾಸ್ ಮಾಡು, ಹುಡ್ಗಿ ಲವ್ ಮಾಡುವಂತೆ ಮಾಡು ಎಂದು ಬರೆಯಲಾಗಿದೆ. ಹೀಗೆ ಗಣೇಶನಿಗೆ ಆತನ ಭಕ್ತರು ಚಿತ್ರ ವಿಚಿತ್ರವಾಗಿ ಬೇಡಿಕೆಯನ್ನು ಇಟ್ಟಿರುವುದು ಕಂಡು ಬಂದಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications