ಶಿವಮೊಗ್ಗದಲ್ಲಿ ಭಾರೀ ಸ್ಫೋಟ; ಸಿಬಿಐ ತನಿಖೆ ಇಲ್ಲ
ಚಿಕ್ಕಮಗಳೂರು, ಜನವರಿ 24: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಗುರುವಾರ ರಾತ್ರಿ ಭಾರೀ ಸ್ಪೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 5 ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ ಭಾನುವಾರ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. "ಸ್ಫೋಟ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ" ಎಂದರು.
"ಶಿವಮೊಗ್ಗ ಹುಣಸೋಡುಗೆ ಸ್ಫೋಟಕಗಳು ಗಣಿಗಾರಿಕೆಗಾಗಿ ಬಂದಿದೆ. ಬೇರೆ ಉದ್ದೇಶಕ್ಕೆ ಬಂದಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಬೇರೆ ರಾಜ್ಯದಿಂದ ಯಾರು ತಂದು ಕೊಡುತ್ತಾರೆ. ಯಾರು ತರ್ತಾರೆ ಅದೂ ತನಿಖೆಯಾಗಬೇಕು" ಎಂದು ಅಶೋಕ ಹೇಳಿದರು.

"ಸ್ಫೋಟ ನಡೆದ ದಿನವೇ ಕಂದಾಯ ಇಲಾಖೆಯಿಂದ ಡಿಸಾಸ್ಟರ್ ಟೀಂ ಕಳಿಸಿದ್ದೇವೆ. ಸ್ಫೋಟಕಗಳ ಸಾಗಣೆಗೆ ಸಂಬಂಧಿಸಿದಂತೆ ಮತ್ತಷ್ಟ ಕಠಿಣ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಸಚಿವರು ಭರವಸೆ ನೀಡಿದರು.
"ಸ್ಫೋಟದ ಶಬ್ಧ 60 ಕಿ. ಮೀ. ವರೆಗೂ ಹೋಗಿದೆ. ಹಲವು ವರ್ಷಗಳಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ. ಸ್ಫೋಟಕ ಸಾಮಾಗ್ರಿಗಳ ಶೇಖರಣೆಗೆ ಬಗ್ಗೆ ನೋಡಿ ಅನುಮತಿ ಕೊಡಬೇಕು. ಆಂಧ್ರ ಪ್ರದೇಶದಿಂದ ಸ್ಫೋಟಕ ಬಂದಿದೆ ಎಂಬ ಮಾಹಿತಿ ಇದೆ" ಎಂದು ಅಶೋಕ ತಿಳಿಸಿದರು.
ಯಾವುದೇ ಗೊಂದಲವಿಲ್ಲ: ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಸಚಿವರು, "ಖಾತೆಯ ಕ್ಯಾತೆ ಮುಗಿದ ಅಧ್ಯಾಯ, ಎಲ್ಲವೂ ನಿನ್ನೆಯೇ ಮುಗಿದ ಅಧ್ಯಾಯವಾಗಿದೆ. ಎಲ್ಲರೂ ಸಿಎಂ ಜೊತೆಯೇ ಇದ್ದಾರೆ ಗೋಪಾಲಯ್ಯ, ಎಂಟಿಬಿ, ಸುಧಾಕರ್, ಶಂಕರ್ ಜೊತೆ ಮೊನ್ನೆಯೇ ಮಾತನಾಡಿದ್ದೇನೆ. ಎಲ್ಲರೂ ಸಮಧಾನವಾಗಿ, ಶಾಂತವಾಗಿ ಇದ್ದಾರೆ, ಯಾವುದೇ ಗೊಂದಲವಿಲ್ಲ" ಎಂದರು ಅಶೋಕ ಸ್ಪಷ್ಟಪಡಿಸಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications