ಚಿಕ್ಕಮಗಳೂರಿನಲ್ಲಿ ಗಿಡ ನೆಟ್ಟು ನಿಶ್ಚಿತಾರ್ಥ ಮಾಡಿಕೊಂಡ ಜೋಡಿ
ಚಿಕ್ಕಮಗಳೂರು : ಹೊಸ ಜೀವನಕ್ಕೆ ಕಾಲಿಡಲು ಅಣಿಯಾದ ಹುಡುಗ ಹುಡುಗಿ, ಉಂಗುರ, ಹೂವಿನ ಹಾರ ಹಾಕಿ ನಿಶ್ಚಿತಾರ್ಥ ಮಾಡಿಕೊಳ್ಳುವುದು ರೂಢಿ. ನಿಶ್ಚಿತಾರ್ಥಕ್ಕೆ, ಮದುವೆಗೆ ಅಥವಾ ಇನ್ನಿತರ ಕಾರ್ಯಕ್ರಮಕ್ಕೆ ಬಂದವರಿಗೆ ಗಿಡವನ್ನು ಉಡುಗೊರೆಯಾಗಿ ಕೊಡುವ ಪರಿಪಾಠವೂ ಈಗೀಗ ಬೆಳೆಯುತ್ತಿದೆ. ಆದರೆ ಚಿಕ್ಕಮಗಳೂರಿನಲ್ಲಿ ಜೋಡಿಯೊಂದು ಗಿಡ ನೆಡುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದೆ. ಈ ಮೂಲಕ ತಮ್ಮ ನೂತನ ಜೀವನವು ಹಸಿರಾಗಿರಲಿ ಎಂದು ಅಡಿಯಿಟ್ಟಿದೆ.
ಚಿಕ್ಕಮಗಳೂರು ನಗರದ ಕಾವ್ಯಾ ಹಾಗೂ ರಂಜು ಮಾವಿನ ಗಿಡ ನೆಡುವ ಮೂಲಕ ನಿಶ್ಚಿತಾರ್ಥವನ್ನ ಮಾಡಿಕೊಂಡು ಇತರರಿಗೂ ಮಾದರಿಯಾಗಿದ್ದಾರೆ. ಕೇವಲ ಉಂಗುರ ಹಾಗೂ ಹಾರ ಬದಲಿಸಿಕೊಳ್ಳುವ ಬದಲು ಗಿಡ ನೆಟ್ಟು ಪರಿಸರ ಕಾಳಜಿ ತೋರಿದ್ದಾರೆ.

ಗಿಡ ನೆಡುವುದು ಮಾತ್ರವಲ್ಲದೇ, ಗಿಡವನ್ನ ಸಂರಕ್ಷಿಸಿ, ಪೋಷಿಸುವ ಜವಾಬ್ದಾರಿಯನ್ನೂ ನವ ಜೋಡಿಗಳು ಹೊತ್ತಿರುವುದು ವಿಶೇಷ. ಹಸಿರು ಬೆಳೆಸುವುದರೊಂದಿಗೆ ಜೀವನವನ್ನೂ ಹಸಿರು, ಹಸನುಗೊಳಿಸೋಣ ಎಂಬ ಸಂದೇಶವೂ ಈ ಕಾರ್ಯದಲ್ಲಿ ಅಡಗಿದೆ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications