'ಗೋ ಬ್ಯಾಕ್ ಶೋಭಕ್ಕ' ಅಭಿಯಾನ; ಸಿ. ಟಿ. ರವಿ ಮನವಿ ಏನು?
ಚಿಕ್ಕಮಗಳೂರು, ಮಾರ್ಚ್ 10: ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?. ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಸಿಗುವುದಿಲ್ಲವೇ? ಈ ಚರ್ಚೆಗಳು ಜೋರಾಗಿವೆ.
ಈ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್ ನೀಡಬಾರದು ಎಂದು 'ಗೋ ಬ್ಯಾಕ್ ಶೋಭಕ್ಕ' ಎಂಬ ಅಭಿಯಾನ ನಡೆಯುತ್ತಿದೆ. ಬಿಜೆಪಿ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಅಭ್ಯರ್ಥಿ ಯಾರು? ಎಂಬುದು ಸಹ ನಿಗೂಢವಾಗಿಯೇ ಉಳಿದಿದೆ.

ಮಾಜಿ ಸಚಿವ ಸಿ. ಟಿ. ರವಿ 'ಗೋ ಬ್ಯಾಕ್ ಶೋಭಕ್ಕ' ಅಭಿಯಾನದ ಕುರಿತು ಮಾತನಾಡಿದ್ದಾರೆ. ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ನಮ್ಮ ಅಭ್ಯರ್ಥಿ ಎಂದು ಕೆಲಸ ಮಾಡಬೇಕು" ಎಂದು ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದರು.
"ಕಾರ್ಯಕರ್ತರೇ ದೇಶ. ದೇಶದ ನಾಯಕತ್ವ ನೋಡಿ, ಯಾರೇ ಅಭ್ಯರ್ಥಿಯಾದರೂ ಮೋದಿ ನಮ್ಮ ಅಭ್ಯರ್ಥಿ ಎಂದು ನಾವು ಕೆಲಸ ಮಾಡಬೇಕು. ಕಾರ್ಯಕರ್ತರ ವೈಮನಸ್ಸು ದೇಶಕ್ಕೆ ಆಪತ್ತು ತರಬಾರದು. ನಾವೆಲ್ಲರೂ ಒಂದೇ ಧ್ವನಿಯಾಗಿ ಕೆಲಸ ಮಾಡಬೇಕು" ಎಂದು ಕರೆ ನೀಡಿದರು.
"ನನ್ನ ಬಳಿ ವೈಯಕ್ತಿಕವಾಗಿ ಮಾತನಾಡಿದವರಿಗೂ ಇದನ್ನೇ ಹೇಳಿದ್ದೇನೆ. ಮೋದಿ ಮತ್ತೊಮ್ಮೆ, ಎಲ್ಲರೂ ಒಂದೇ ಗುರಿಯಲ್ಲಿ ಕೆಲಸ ಮಾಡಬೇಕು. ನಿಮ್ಮ ಭಾವನೆ ತಿಳಿಸುವುದಕ್ಕೆ ಬೇರೆ ಮಾರ್ಗಗಳು ಇವೆ" ಎಂದು ಗೋ ಬ್ಯಾಕ್ ಶೋಭಕ್ಕ ಅಭಿಯಾನ ಕೈಗೊಂಡ ಕಾರ್ಯಕರ್ತರಿಗೆ ಸಿ. ಟಿ. ರವಿ ಮನವಿ ಮಾಡಿದ್ದಾರೆ.
'ಗೋ ಬ್ಯಾಕ್ ಶೋಭಕ್ಕ' ಎಂಬ ಅಭಿಯಾನ ಕಳೆದ ಚುನಾವಣೆಯ ಸಂದರ್ಭದಲ್ಲಿಯೂ ನಡೆದಿತ್ತು. ಆದರೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಸಿಕ್ಕಿತ್ತು. ಅವರು ಚುನಾವಣೆ ಗೆದ್ದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರು ಸಹ ಆದರು. ಈ ಬಾರಿ ಶೋಭಾ ಕರಂದ್ಲಾಜೆ ಬದಲು ಸಿ. ಟಿ. ರವಿ, ಪ್ರಮೋದ್ ಮಧ್ವರಾಜ್ ಅಥವ ಬೇರೆ ನಾಯಕರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವಿದೆ.
ಸಚಿವೆ ಶೋಭಾ ಕರಂದ್ಲಾಜೆ 'ಗೋ ಬ್ಯಾಕ್ ಶೋಭಕ್ಕ' ಅಭಿಯಾನಕ್ಕೆ ತಲೆಕೆಡಿಸಿಕೊಳ್ಳದೇ ಚುನಾವಣಾ ತಯಾರಿಯಲ್ಲಿ ತೊಡಗಿದ್ದಾರೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಶೋಭಾ ಕರಂದ್ಲಾಜೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ನನ್ನ ಗ್ರಹಚಾರ ಸರಿ ಇರಲಿಲ್ಲ ಸೋತೆ: ಸಿ. ಟಿ. ರವಿ 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸೋತ ಕುರಿತು ಸಹ ಮಾತನಾಡಿದರು. "ನನ್ನ ಗ್ರಹಚಾರ ಸರಿ ಇರಲಿಲ್ಲ, ಹಾಗಾಗಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತೆ, ಚುನಾವಣೆಯಲ್ಲಿ ಸೋಲಿಗೆ ನಂದೇ ತಪ್ಪು ಇರಬಹುದು ಎಂದು ಹೇಳಿದ್ದೆ" ಎಂದರು.
ಚಿಕ್ಕಮಗಳೂರಿನಲ್ಲಿ ಸಿ. ಟಿ. ರವಿ ಸೋಲಿಗೆ ಶೋಭಾ ಕರಂದ್ಲಾಜೆ ಕಾರಣ ಎಂಬ ಕಾರ್ಯಕರ್ತರ ಆಕ್ರೋಶದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ನನ್ನ ಅತಿ ವಿಶ್ವಾಸದಿಂದ ಸೋತಿದ್ದೇನೆ. ಅತಿ ವಿಶ್ವಾಸವೂ ಕೆಲವೊಮ್ಮೆ ಸೋಲಿಗೆ ಕಾರಣವಾಗುತ್ತೆ. ನಾನು ಮತ್ತೊಬ್ಬರ ಕಡೆ ಬೊಟ್ಟು ಮಾಡಲ್ಲ, ಅವರವರ ಕರ್ಮ ಅವರವರು ಅನುಭವಿಸಬೇಕು" ಎಂದು ಹೇಳಿದರು.
"ನಂದೆ ತಪ್ಪು ಇರಬಹುದು, ನನ್ನ ತಪ್ಪಿಂದಲೇ ಸೋತಿದ್ದೇನೆ ಎಂದು ಈಗಾಗಲೇ ಹೇಳಿಕೊಂಡಿದ್ದೇನೆ. ಯಾರಾದರೂ ಪಕ್ಷ ದ್ರೋಹ ಮಾಡಿದ್ದರೆ ಕರ್ಮ ಬೆಂಬಿಡದೆ ಕಾಡುತ್ತದೆ. ಮೆಡಿಕಲ್ ಕಾಲೇಜು, ಹೈವೆ, ಕೆರೆಗೆ ನೀರು ತುಂಬಿಸುವ ಯೋಜನೆ ಸೇರಿ ಸಾಕಷ್ಟು ಕೆಲಸ ಮಾಡಿದ್ದೇನೆ. ಜನ ನನ್ನ ಕೈ ಬಿಡಲ್ಲ ಅಂತ ಅತಿ ವಿಶ್ವಾಸವಿತ್ತು, ಅದರಿಂದ ಸೋತಿದ್ದೇನೆ" ಎಂದು ತಿಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications