"ಡ್ರಗ್ ಮಾಫಿಯಾ; ಯಾರು ಒತ್ತಡ ತಂದರೂ ಮಣಿಯುವುದಿಲ್ಲ"
ಚಿಕ್ಕಮಗಳೂರು, ಸೆಪ್ಟೆಂಬರ್ 4: "ಡ್ರಗ್ ಮಾಫಿಯಾ ಇಂದು ನಿನ್ನೆಯದಲ್ಲ. ಆಗಾಗ ಇದನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರೂ ಬೇರು ಸಮೇತ ಕಿತ್ತುಹಾಕಲು ಸಾಧ್ಯವಾಗಿಲ್ಲ. ಈಗ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ" ಎಂದು ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತು ಪ್ರತಿಕ್ರಿಯಿಸಿದ್ದಾರೆ ಸಚಿವ ಸಿ.ಟಿ. ರವಿ.
Recommended Video
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಡ್ರಗ್ ಮಾಫಿಯಾ ಜಾಲಕ್ಕೆ ಸಂಬಂಧಿಸಿದಂತೆ 84ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಲಾಗಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಂಡಿಲ್ಲ. ಮಾಫಿಯಾದಲ್ಲಿ ಯಾರೇ ತೊಡಗಿಕೊಂಡಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯುವ ಜನರನ್ನು ಪಿಡುಗಿನಿಂದ ಮುಕ್ತಗೊಳಿಸಬೇಕೆಂಬ ಜವಾಬ್ದಾರಿ ಸರ್ಕಾರದ ಮೇಲಿದೆ" ಎಂದು ಹೇಳಿದರು.
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ; ಸಚಿವ ಸಿ.ಟಿ.ರವಿ ಏನಂದರು?
" ಈ ಜಾಲ ರಾಜ್ಯಕ್ಕೆ ಸೀಮಿತವಾಗಿಲ್ಲ, ಹೊರರಾಜ್ಯ, ಹೊರದೇಶಗಳ ಸಂಪರ್ಕ ಕೂಡ ಇದೆ. ಕೆಲವೆಡೆ ಭಯೋತ್ಪಾದಕರ ಜೊತೆ ತಳುಕು ಹಾಕಿಕೊಂಡಿದೆ. ರಾಜಕಾರಣಿಗಳ, ಸಿನಿಮಾ ನಟ-ನಟಿಯರನ್ನು ತಳುಕು ಹಾಕಿಕೊಂಡಿದೆ. ಜೊತೆಗೆ ತನಿಖಾ ತಂಡದ ಮೇಲೆ ಒತ್ತಡ ತರುವಂತಹ ಕೆಲಸ ನಡೆಯುತ್ತಿದೆ. ಆದರೆ ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಯಾರೇ ಇದ್ದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ" ಎಂದು ಸ್ಪಷ್ಟಪಡಿಸಿದರು.