ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವರು ಅವರು: HDK ಹೀಗೆ ಹೇಳಿದ್ದು ಯಾರಿಗೆ & ಯಾಕೆ?

ಚಿಕ್ಕಮಗಳೂರು, ನವೆಂಬರ್‌, 19: ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವರು ಅವರು, ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತರ ಪೋಸ್ಟರ್ ಪ್ರಿಪೇರ್ ಮಾಡಿಸೋದು ಬಿಟ್ಟು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ಏಕವಚನದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಮಾತಾನಾಡಿದ ಅವರು, ಆತರ ಪೋಸ್ಟರ್ ಪ್ರಿಪೇರ್ ಮಾಡಿಸೋದು ಬಿಟ್ಟು, ಅದನ್ನ ಬಿಟ್ಟು ದೇವರದ್ದು ಹಾಕಿಸುತ್ತಾನಾ, ದೊಡ್ಡ ಆಲದಹಳ್ಳಿಯ ಸಾತನೂರಿನಲ್ಲಿ 2 ಟೆಂಟ್ ಇದ್ವಲ್ಲಾ. ಮಳಿಯಾಳಿ ಸಿನಿಮಾಗೆ ಕಟ್ಟಿಂಗ್ ಸೇರಿಸೋರಲ್ಲ, ನಾವು ಚಿಕ್ಕವರಿದ್ದಾಗ ಎಂದರು.

H.D.Kumaraswamy outrage against D.K.Shivakumar

ಇನ್ನು ನಾನು ಆ ಜೀವನ ಮಾಡಿಕೊಂಡು ಬಂದಿಲ್ಲ. ಅದನ್ನೇ ಮುಂದುವರೆಸುತ್ತಿದ್ದಾರೆ. ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ. ಅಂತಹವರನ್ನ ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸಿಗು ಇಂದು ಅಂತವರಿಗೆ ಅಧಿಕಾರ ನೀಡಿದ್ದಾರೆ. ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು ಏನು ಮಾಡೋದು ಎಂದು ಕಿಡಿಕಾರಿದರು.

ಬಿಜೆಪಿಯಿಂದಾಗಿ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ

​ಬಿಜೆಪಿಯವರು ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ನಾಶ ಮಾಡಿದ್ದಾರೆ. ಆರ್ಥಿಕವಾಗಿ ದೇಶ ದಿವಾಳಿಯಾಗಿದ್ದು, ₹165 ಲಕ್ಷ ಕೋಟಿ ಸಾಲ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಹುಬ್ಬಳ್ಳಿಯಲ್ಲಿ ಟೀಕಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ವ್ಯಕ್ತಿಯನ್ನು ದೇವರೆಂದು ಪ್ರತಿಬಿಂಬಿಸುವುದು, ಅವರನ್ನೇ ವಿಶ್ವಗುರು ಎಂದು ಹೇಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದರು. ಇನ್ನು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿ ಅವರು ಹತ್ತು ವರ್ಷ ಏನು ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಸಬೇಕು. ಇನ್ನು ಆರು ತಿಂಗಳು ರಾಜ್ಯದ ವಿಷಯ ಮಾತನಾಡಬಾರದು ಎಂದು ಹೇಳಿದರು

ದೇಶದ ಹಿತಾಸಕ್ತಿ ಕಾಪಾಡುವ ಜೊತೆಗೆ, ಪ್ರಗತಿಯತ್ತ ಮುನ್ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏನು ಮಾಡಿದೆ ಎಂಬುದನ್ನು ಪ್ರಶ್ನೆ ಮಾಡುವ ಸಮಯ ಬಂದಿದೆ ಎಂದು ಎಂದರು. ಇನ್ನು ಪ್ರತಿ ವರ್ಷ ಒಂದಿಲ್ಲೊಂದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತವೆ. ಮೋದಿ ಅವರು ಚುನಾವಣೆ ಭಾಷಣ ಮಾಡಿ, ಕಾಂಗ್ರೆಸ್‌ಗೆ ಬೈದಿದ್ದು ಬಿಟ್ಟರೆ ಹತ್ತು ವರ್ಷಗಳಲ್ಲಿ ಏನೂ ಮಾಡಿಲ್ಲ ಎಂದು ಟೀಕಿಸಿದರು.

ಸ್ಮಾರ್ಟ್‌ ಸಿಟಿ, ಬುಲೆಟ್‌ ರೈಲು, ರೈತರ ಆದಾಯ ದ್ವಿಗುಣಗೊಳಿಸುವುದು, 2 ಕೋಟಿ ಉದ್ಯೋಗ ಸೃಷ್ಟಿ, ಮೇಕ್‌ ಇನ್‌ ಇಂಡಿಯಾ ಸೇರಿದಂತೆ ಹಲವು ಯೋಜನೆಗಳ ಮೂಲಕ ಸುಳ್ಳು ಭರವಸೆ ನೀಡಿದ್ದರು. ಮಧ್ಯಪ್ರದೇಶದಲ್ಲಿ ವ್ಯಾಪಂ ಹಗರಣದ ಸಾಕ್ಷಿಗಳಾಗಿದ್ದ 44 ಜನರನ್ನು ಕೊಲೆ ಮಾಡಲಾಗಿದೆ. ಅವುಗಳ ಬಗ್ಗೆ ಮಾತನಾಡುತ್ತಿಲ್ಲ. ನೆಹರೂ, ಇಂದಿರಾಗಾಂಧಿ, ಮನಮೋಹನ್‌ಸಿಂಗ್ ಅವರಿಗೆ ಬೈಯುವುದೇ ಕೆಲಸವಾಗಿದೆ ಎಂದು ಹೇಳಿದರು.

ವಿಜಯೇಂದ್ರ ಅವರ ಹಸ್ತಕ್ಷೇಪ, ಭ್ರಷ್ಟಾಚಾರದ ಕಾರಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲಾಯಿತು ಎಂದು ಬಿಜೆಪಿಯವರೇ ಹೇಳಿದ್ದರು. ಈಗ ಅವರನ್ನೇ ಏಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ? ಎಂದು ಪ್ರಶ್ನಿಸಿದರು. ಯತೀಂದ್ರ ಅವರ ವಿಡಿಯೊದಲ್ಲಿ ವರ್ಗಾವಣೆ ಬಗ್ಗೆ ಪ್ರಸ್ತಾಪವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ವಿಜಯೇಂದ್ರ ಬಗ್ಗೆ ಬಿಜೆಪಿಯವರು ಈ ಹಿಂದೆ ಏನು ಹೇಳಿದ್ದರು ಎಂಬುದು ಅವರಿಗೆ ನೆನಪಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+