ವಿಶ್ವನಾಥ್ಗೆ ಸಚಿವ ಸ್ಥಾನವಿಲ್ಲ: ಕಾನೂನು ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ
ಚಿಕ್ಕಮಗಳೂರು, ಡಿಸೆಂಬರ್ 1: ಎಚ್.ವಿಶ್ವನಾಥ್ಗೆ ಸಚಿವ ಸ್ಥಾನ ನೀಡುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿರುವ ವಿಚಾರವಾಗಿ, ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಸಚಿವ ಮಾಧುಸ್ವಾಮಿ ಮಾತನಾಡಿದರು.
ನಾವು ಎಚ್.ವಿಶ್ವನಾಥ್ ಅವರ ಪರ ಇದ್ದೇವೆ, ನಮ್ಮ ಜೊತೆ ಬಂದ ಯಾರ ಬೆನ್ನಿಗೂ ಚೂರಿ ಹಾಕುವುದಿಲ್ಲ. ಕೋರ್ಟ್ ಆದೇಶಕ್ಕೆ ನಾವು ಹೊಣೆಯಾಗುವುದಿಲ್ಲ. ಅವರು ಚುನಾವಣೆಯಲ್ಲಿ ಸೋತರೂ ಎಂಎಲ್ಸಿ ಆಗಿದ್ದಾರೆ ಎಂದು ಹೇಳಿದರು.
ಸೋತವರಿಗೆ ಬೇರೆ ಯಾವ ಪಕ್ಷದಲ್ಲಿಲೂ ಈ ಮಟ್ಟದ ಮನ್ನಣೆ ಸಿಗುತ್ತಿರಲಿಲ್ಲ. ಅಡ್ವೋಕೇಟ್ ಜನರಲ್ ಹಾಗೂ ನಾವು ಏನು ಮಾಡಬೇಕು ಅದನ್ನು ಮಾಡಿದ್ದೇವೆ. ಅದನ್ನು ಮೀರಿ ಕೋರ್ಟ್ ತೀರ್ಪಿಗೆ ಯಾರನ್ನೂ ದೂಷಿಸುವಂತಿಲ್ಲ ಎಂದು ತಿಳಿಸಿದರು.

ಆದರೂ ಕೂಡಾ ನಾವು ಅಪೀಲ್ ಹೋಗುತ್ತೇವೆ, ಮತ್ತೊಂದು ಪ್ರಯತ್ನ ಮಾಡುತ್ತೇವೆ. ಅವರಿಗೆ ಮೋಸ ಆಗಲು ಬಿಡುವುದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ಸಿದ್ದರಾಮಯ್ಯನವರ ತಲೆಕೆಟ್ಟ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಲವ್ ಜಿಹಾದ್ ಸಂಬಂಧ ಕಾನೂನು ತರುವ ಆಲೋಚನೆ ಇಲ್ಲ. ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿರುವವರು ಇದ್ದಾರೆ. ಎಲ್ಲರೂ ಮಿಕ್ಸ್ ಆಗಿರುವುದೇ ಭಾರತ ದೇಶ ಎಂದರು.
ಈ ದೇಶದಲ್ಲಿರುವ ಶೇ.60 ರಿಂದ 70 ರಷ್ಟು ಮಂದಿ ಮೂಲ ಹಿಂದೂಗಳೇ. ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರೂ ಮತಾಂತರ ಹೊಂದಿರುವವರೇ. ಒಂದು ಸಮುದಾಯವನ್ನು ಓಲೈಸಲು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಮಾಧುಸ್ವಾಮಿ ಕಿಡಿಕಾರಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications