ದತ್ತ ಪೀಠಕ್ಕೆ ಬರದಿದ್ದರೆ ಅಧಿಕಾರ ಕಳೆದುಕೊಳ್ಳುತ್ತೀರೆಂದು ಬಿಎಸ್ವೈಗೆ ಎಚ್ಚರಿಸಿದ್ದೆ : ಗಂಗಾಧರ್ ಕುಲಕರ್ಣಿ
ಚಿಕ್ಕಮಗಳೂರು, ಅಕ್ಟೋಬರ್ 11 : ದತ್ತಪೀಠದಲ್ಲಿ ನವೆಂಬರ್ 13ರ ಒಳಗೆ ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶ್ರೀರಾಮ ಸೇನೆ ದತ್ತಪೀಠ ವಿಚಾರವಾಗಿ 18 ವರ್ಷಗಳ ಸುಧೀರ್ಘ ಹೋರಾಟ ನಡೆಸುತ್ತಿದೆ. ನ್ಯಾಯಾಲಯ ಹಿಂದೂ ಅರ್ಚಕರ ನೇಮಕ ಮಾಡುವಂತೆ ಆದೇಶಿಸಿದೆ. ಸದನ ಸಮಿತಿ ವರದಿ ನೀಡಿದೆ. ಆದರೆ, ಹಿಂದೂ ಅರ್ಚಕರ ನೇಮಕ ಮಾಡಲು ರಾಜ್ಯ ಸರಕಾರ ಮೀನಾಮೇಷ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನವೆಂಬರ್ 13ರೊಳಗೆ ರಾಜ್ಯ ಸರ್ಕಾರ ಹಿಂದೂ ಅರ್ಚಕರನ್ನು ನೇಮಕ ಮಾಡದಿದ್ದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಅಹಿತಕರ ಘಟನೆ ಸಂಭವಿಸಿದರೇ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದ ಅವರು, ರಾಜ್ಯ ಸರಕಾರ ಹಿಂದೂ ಅರ್ಚಕರ ನೇಮಕ ಮಾಡಲು ಮೀನಾಮೇಷ ಮಾಡಿದಲ್ಲಿ ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಕಿಡಿ ಕಾರಿದರು.

ಇನ್ನು ಸರಕಾರಕ್ಕೆ ನೇರವಾಗಿ ಎಚ್ಚರಿಕೆ ನೀಡಿದ ಅವರು ಕೋರ್ಟ್ನಲ್ಲಿ ಕೇಸ್ ಕ್ಲಿಯರ್ ಆಗಿದೆ. ದತ್ತಪೀಠವನ್ನು ನೀವೇ ಇಟ್ಟುಕೊಂಡು ಮೆರೆದವರು. ಇಲ್ಲಿಯವರೆಗೂ ಅರ್ಚಕರನ್ನು ನೇಮಕ ಮಾಡದೇ ಇರುವುದು ನಾಚಿಕೇಡಿನ ಸಂಗತಿ. ಈಗ ಹಿಂದೂ ಸಮಾಜ ಜಾಗೃತವಾಗಿದೆ. ನವೆಂಬರ್ 13ರ ಒಳಗೆ ಅರ್ಚಕರನ್ನು ನೇಮಕ ಮಾಡಲೇಬೇಕು. ಒಂದು ವೇಳೆ ಮಾಡದಿದ್ದರೆ ಪ್ರವೀಣ್ ನೆಟ್ಟಾರು ಹತ್ಯೆಯ ಸಂದರ್ಭ, ಹಿಂದು ಸಮಾಜ ಯಾವ ರೀತಿ ಆಕ್ರೋಶ ವ್ಯಕ್ತಪಡಿಸಿತ್ತೋ , ಅದೇ ರೀತಿ ಆಕ್ರೋಶ ದತ್ತಪೀಠದಲ್ಲಿ ನೀವು ನೋಡುತ್ತೀರಾ ಎಂದು ಎಚ್ಚರಿಕೆ ನೀಡಿದರು.
ದತ್ತ ಮಾಲೆ ಧರಿಸಿ ಬಿ ಎಸ್ ಯಡಿಯೂರಪ್ಪ ದತ್ತ ಪೀಠಕ್ಕೆ ಬರದಿದ್ದರೆ, ಅಧಿಕಾರ ಕಳೆದುಕೊಳ್ಳುತ್ತೀರಾ ಎಂದು ಹೇಳಿದ್ದೆ, ಅದೇ ರೀತಿ ಆಯಿತು. ಈಗ ಅರ್ಚಕರನ್ನು ನೇಮಕ ಮಾಡದಿದ್ದರೆ ನಿಮ್ಮನ್ನು ಹಿಂದೂ ಸಮಾಜ ಸಂಪೂರ್ಣವಾಗಿ ತಿರಸ್ಕಾರ ಮಾಡುತ್ತದೆ. ನಾನು ಎಚ್ಚರಿಕೆ ಕೊಡುವುದರ ಮೂಲಕ ಈ ಮಾತನ್ನು ಹೇಳುತ್ತಿದ್ದೇನೆ. ನಮಗೂ ಹೋರಾಟ ಮಾಡಿ ಸಾಕಾಗಿ ಹೋಗಿದೆ. ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ, ನಮಗೆ ಸಹಿಸೋಕೆ ಸಾಧ್ಯವಿಲ್ಲ. ಏಕೆ ಹಿಂದೂ ಧರ್ಮಕ್ಕೆ ಅನ್ಯಾಯ ಮಾಡುತ್ತಿದ್ದೀರಾ. ಕಾರ್ಯಕರ್ತರು ತುಂಬಾ ಆಕ್ರೋಶದಿಂದಿದ್ದಾರೆ, ಒಂದು ತೀರ್ಮಾನಕ್ಕೆ ಬರೆದಿದ್ದರೆ, ಏನು ಬೇಕಾದರೂ ಆಗಬಹುದು ಎಂದು ಸರಕಾರಕ್ಕೆ ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆಯ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications