ಹಳುವಳ್ಳಿಯ ರಸ್ತೆ ಮಧ್ಯೆ ಎರಡ್ಮೂರು ಬಾರಿ ಕೆಟ್ಟುನಿಂತ ಆ್ಯಂಬುಲೆನ್ಸ್, ತುಂಬು ಗರ್ಭಿಣಿಯ ನರಳಾಟ, ಭುಗಿಲೆದ್ದ ಜನಾಕ್ರೋಶ
ಕಳಸ ತಾಲೂಕಿನ ಹಳುವಳ್ಳಿ ಗ್ರಾಮದ ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಆ್ಯಂಬುಲೆನ್ಸ್ ಕೆಟ್ಟು ನಿಂತಿದೆ. ದುರಸ್ತಿ ಮಾಡಿಕೊಂಡು ಹೊರಟರೆ ಸ್ವಲ್ಪ ದೂರದಲ್ಲಿ ತಾಂತ್ರಿಕ ದೋಷದಿಂದ ಮತ್ತೆ ನಿಂತಿದ್ದು, ಇದರಿಂದ ಗರ್ಭಿಣಿ ಮಹಿಳೆ ನರಳಾಡಿದ್ದಾಳೆ.
ಚಿಕ್ಕಮಗಳೂರು, ಫೆಬ್ರವರಿ, 13: ಸರ್ಕಾರಿ ಆ್ಯಂಬುಲೆನ್ಸ್ ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ತುಂಬು ಗರ್ಭಿಣಿಯೊಬ್ಬಳು ರಸ್ತೆ ಮಧ್ಯೆ ಸಾವು-ಬದುಕಿನ ಮಧ್ಯೆ ಹೋರಾಡಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಫಿನಾಡಿನಲ್ಲಿ ಸರ್ಕಾರಿ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಕೆಟ್ಟು ನಿಂತ ಪರಿಣಾಮ ತುಂಬ ಗರ್ಭಿಣಿ ನಡು ರಸ್ತೆಯಲ್ಲಿ ಗಂಟೆಗಟ್ಟಲೆ ನರಳಾಡಿದ್ದಾಳೆ.
ಕಳಸ ತಾಲೂಕಿನ ಹಳುವಳ್ಳಿ ಗ್ರಾಮದ ಶರಣ್ಯ ಎಂಬ ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಆ್ಯಂಬುಲೆನ್ಸ್ ಕೆಟ್ಟು ನಿಂತಿದೆ. ದುರಸ್ತಿ ಮಾಡಿಕೊಂಡು ಹೊರಟರೆ ಸ್ವಲ್ಪ ದೂರದಲ್ಲಿ ತಾಂತ್ರಿಕ ದೋಷದಿಂದ ಮತ್ತೆ ನಿಂತಿತ್ತು. ಈ ಮಧ್ಯೆ ರಸ್ತೆಯಲ್ಲಿನ ಗುಂಡಿಗೆ ಇಳಿದ ಆ್ಯಂಬುಲೆನ್ಸ್, ಪಂಚರ್ ಕೂಡ ಆಗಿದೆ. ಹೀಗೆ ಎರಡ್ಮೂರು ಬಾರಿ ಕೆಟ್ಟು ನಿಂತ ಆ್ಯಂಬುಲೆನ್ಸ್ ದುರಸ್ತಿಯಾಗುವಷ್ಟರಲ್ಲಿ ಸುಮಾರು 2 ಗಂಟೆಗಳೇ ಕಳೆದಿದೆ.

ತುಂಬು ಗರ್ಭಿಣಿಯ ನರಳಾಟ
ಇದರಿಂದ ತೀವ್ರ ಅಸ್ವಸ್ಥರಾದ ಶರಣ್ಯಳನ್ನು ಕಂಡು ಸ್ಥಳಿಯರು ಬಾಳೆಹೊನ್ನೂರಿಗೆ ಫೋನ್ ಮಾಡಿ ಬೇರೆ ಆ್ಯಂಬುಲೆನ್ಸ್ ಕರೆಸಿದ್ದಾರೆ. ನಂತರ ಆಕೆಯನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಪ್ಪ ಆಸ್ಪತ್ರೆಗೆ ದಾಖಲಾದ ಶರಣ್ಯ ಗಂಡು ಮಗುವಿಗೆ ಜನ್ಮ ನೀಡಿ ತಾಯಿ ಮಗು ಇದೀಗ ಆರೋಗ್ಯವಾಗಿದ್ದಾರೆ. ಜೀವ ಉಳಿಸುವ ಆ್ಯಂಬುಲೆನ್ಸ್ಗಳೇ ಹೀಗೆ ರಸ್ತೆ ಮಧ್ಯೆ ಕೆಟ್ಟು ನಿಲ್ಲುತ್ತಿರುವುದರಿಂದ ಜನಸಾಮಾನ್ಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ರಸ್ತೆ ಮಧ್ಯೆ ಕೆಟ್ಟು ನಿಂತ ಆ್ಯಂಬುಲೆನ್ಸ್
ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಸ್ಟೇರಿಂಗ್ ರಾಡ್ ಕಟ್ಟಾಗಿ ನಿಲ್ಲುತ್ತವೆ ಎಂದರೆ ಅವುಗಳು ಎಷ್ಟು ಹಾಳಾಗಿರಬಹುದು ಎಂದು ಜನಸಾಮಾನ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬೇರೊಂದು ಆ್ಯಂಬುಲೆನ್ಸ್ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದೆ. ಅದೃಷ್ಟವಶಾತ್ ತಾಯಿ -ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಸಮಯಕ್ಕೆ ಸರಿಯಾಗಿ ಬೇರೊಂದು ಆ್ಯಂಬುಲೆನ್ಸ್ ಸಿಗದಿದ್ದರೆ ಏನಾದರೂ ಅನಾಹುತ ಸಂಭವಿಸಿದ್ದರೆ ಜವಾಬ್ದಾರಿ ಯಾರೆಂದು ಸ್ಥಳೀಯರು ಸರ್ಕಾರಕ್ಕೆ ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯ, ಜನರಿಗೆ ಆಪತ್ತು
ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಈ ಆಂಬುಲೆನ್ಸ್ ಹೀಗೆ ರಸ್ತೆ ಮಧ್ಯೆ ಕೆಟ್ಟು ನಿಂತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಕೂಡ ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಕೆಟ್ಟು ನಿಂತಿತ್ತು. ಆಗಲೂ ಕೂಡ ಬೇರೊಂದು ಆ್ಯಂಬುಲೆನ್ಸ್ನಲ್ಲಿ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸಾಲದಕ್ಕೆ ಈ ಆಂಬುಲೆನ್ಸ್ ಹೊಸದು ಎಂದು ಹೇಳಲಾಗುತ್ತಿದೆ. ಹೊಸ ಆ್ಯಂಬುಲೆನ್ಸ್ಗಳು ಹೀಗೆ ಕೆಟ್ಟು ನಿಂತರೆ, ಅದರ ಸಾಮರ್ಥ್ಯದ ಬಗ್ಗೆ ಯೋಚಿಸಬೇಕಾಗುತ್ತದೆ ಎಂದು ಜನರು ಹೇಳುತ್ತಿದ್ದಾರೆ.
ಒಟ್ಟಾರೆ, ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಸ್ಥಿತಿ ಕಂಡು ಜನ ನಗುತ್ತಿದ್ದಾರೆ. ರಾಜಕಾರಣಿಗಳು-ಅಧಿಕಾರಿಗಳು ಆಗಾಗ್ಗೆ ಹೊಸ-ಹೊಸ ಐಶಾರಾಮಿ ಕಾರುಗಳನ್ನು ಖರೀದಿಸುತ್ತಾರೆ. ಆದರೆ, ಬಡ ಜನರಿಗಾದರೆ ರಸ್ತೆ ಮಧ್ಯೆ ಮೂರ್ನಾಲ್ಕು ಬಾರಿ ಕೆಟ್ಟು ನಿಲ್ಲುವ ಆ್ಯಂಬುಲೆನ್ಸ್ಗಳನ್ನು ನೀಡುತ್ತಾರೆ. ಇದು ಯಾವ ಸೀಮೆ ನ್ಯಾಯ. ಇದನ್ನೆಲ್ಲಾ ಕಂಡ ಜನ, ಜನರಿಗಾಗಿ ಸರ್ಕಾರವೋ ಅಥವಾ ಸರ್ಕಾರ-ಅಧಿಕಾರಕ್ಕಾಗಿ ಜನರೋ ಎನ್ನುವ ಪ್ರಶ್ನೆಗಳು ಉದ್ಭವವಾಗುತ್ತಿವೆ ಎಂದು ಜನರು ಹೇಳುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications