ಚಿಕ್ಕಮಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ
ಚಿಕ್ಕಮಗಳೂರು, ಅಕ್ಟೋಬರ್ 29 : ರಾಜ್ಯದಲ್ಲೇ ಮೊದಲ ಬಾರಿಗೆ ಚಿಕ್ಕಮಗಳೂರು ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ ಮಾಡಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿ ಪೌರ ಕಾರ್ಮಿಕರು, ಆರೋಗ್ಯ ನಿರೀಕ್ಷಕರು ಇನ್ನಿತರೆ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಎಲ್ಲಾ ಪೌರ ಕಾರ್ಮಿಕರಿಗೆ ನಗಸಭೆ ವತಿಯಿಂದ ವಾರ್ಷಿಕ ತಲಾ 11 ಲಕ್ಷ ರೂ.ಗಳ ಆರೋಗ್ಯ ವಿಮೆ ಭರಿಸಲಾಗುತ್ತಿದೆ ಎಂದು ವಿವರಿಸಿದರು.

ಇದಲ್ಲದೆ ಬರೋಡ ಬ್ಯಾಂಕ್ ಜೊತೆ ಮಾತುಕತೆ ನಡೆಸಿ ಅಪಘಾತ ವಿಮೆ ಮಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರಿಗೆ ತಲಾ 40 ಲಕ್ಷ ರೂ.ನ ವಿಮೆ ಇದಾಗಿರುತ್ತದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ವರಸಿದ್ದಿ ವೇಣುಗೋಪಾಲ್ ಪೌರ ಕಾರ್ಮಿಕರಿಗೆ ಮನವಿ ಮಾಡಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿತ್ತು. ನಿನ್ನೆ ಇಡೀದಿನ ಅದನ್ನು ಸರಿಪಡಿಸುವ ಕೆಲಸ ಮಾಡಿಸಿದ್ದೇವೆ. ನಗರಸಭೆ ಇಂಜಿನೀಯರುಗಳು, ಸಿಬ್ಬಂದಿ ಮೋಟಾರ್ ದುರಸ್ಥಿಪಡಿಸುವ ಕೆಲಸ ಮಾಡಿ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದೇವೆ ಎಂದರು.
ನಗರಸಭೆ ಆಯುಕ್ತ ಬಸವರಾಜು ಮಾತನಾಡಿ, ನಗರದ ಸ್ವಚ್ಛತೆ ವಿಚಾರದಲ್ಲಿ ಯಾವುದೇ ಲೋಪವಾಗಬಾರದು ಎಂದು ಪೌರ ಕಾರ್ಮಿಕರು ಮತ್ತಿತರೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದೇವೆ ಎಂದರು. ನಿರ್ಮಲಭಾರತಿ ಟ್ರಸ್ಟ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಪೌರ ಕಾರ್ಮಿಕರು ತಿಳಿಸಿದ್ದಾರೆ. ಈ ಸಂಬಂಧ ಸಂಬಂಧಿಸಿದ ಸಂಸ್ಥೆಗೆ ನೋಟೀಸು ನೀಡಲು ಸೂಚಿಸಿದ್ದೇವೆ ಎಂದರು.

ನಾಳೆಯಿಂದ ಎಲ್ಲಾ 162 ಮಂದಿ ಪೌರ ಕಾರ್ಮಿಕರು ನಗರಸಭೆ ಕಚೇರಿಗೆ ಬಂದು ಬಯೋಮೆಟ್ರಿಕ್ನಲ್ಲಿ ಹಾಜರಾತಿ ಹಾಕಿ ನಂತರ ಕರ್ತವ್ಯಕ್ಕೆ ಹೋಗಬೇಕು. ನೀರು ಸರಬರಾಜು ಸಿಬ್ಬಂದಿ ಸಹ ಬೆಳಗ್ಗೆ 7 ಕ್ಕೆ ಕಚೇರಿಗೆ ಬಂದು ಹಾಜರಾತಿ ಹಾಕಬೇಕು. ಕಂದಾಯ ಶಾಖೆ ಸಿಬ್ಬಂದಿ 8 ಗಂಟೆಗೆ ಬಂದು ಬಯೋಮೆಟ್ರಿಕ್ ಹಾಜರಾತಿ ಹಾಕಬೇಕು. ನಿಗಧಿತ ಸಮಯದಲ್ಲಿ ಬಂದು ಹಾಜರಾತಿ ಹಾಕದಿದ್ದಲ್ಲಿ ಅಂದು ಗೈರು ಹಾಜರು ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications