ಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ
ಚಿಕ್ಕಮಗಳೂರು, ಸೆಪ್ಟೆಂಬರ್ 4: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಗುರುವಾರ ಸಂಜೆಯ ಬಳಿಕ ಮಲೆನಾಡಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ, ಬಾಳೆಹೊನ್ನೂರು, ಶೃಂಗೇರಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಗುಡುಗು-ಸಿಡಿಲಿನ ಮಳೆ ಮಲೆನಾಡಿಗರು ಹೈರಾಣಾಗಿದ್ದಾರೆ.
ಬಾಳೆಹೊನ್ನೂರಲ್ಲಿ ಒಂದೇ ಗಂಟೆಗೆ ನಾಲ್ಕು ಇಂಚಿನಷ್ಟು ಮಳೆ ಸುರಿದಿದೆ. ಭತ್ತದ ಗದ್ದೆಗಳ ಮೇಲೆ ಹರಿದ ಮಳೆ ನೀರು ನಿಂತಿದ್ದು, ಬಾಳೆಹೊನ್ನೂರಿನ ದೋಬಿ ಹಳ್ಳ ಮೈದುಂಬಿ ಹರಿದಿದೆ.

ಮೂಡಿಗೆರೆ, ಕೊಪ್ಪ ತಾಲ್ಲೂಕುಗಳಲ್ಲಿ ಮಳೆ ಬಿಟ್ಟು ಬಿಟ್ಟು ಸುರಿಯುತ್ತಿದ್ದರೆ, ಇತ್ತ ಬಯಲುಸೀಮೆ ತರೀಕೆರೆ, ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದ್ದು. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ರವರೆಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಹೆಚ್ಚು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications