ಚಿಕ್ಕಮಗಳೂರಲ್ಲಿ ಮತ್ತೆ ಭಾರೀ ಮಳೆ: ಮಲೆನಾಡಿಗರಲ್ಲಿ ಆತಂಕ
ಚಿಕ್ಕಮಗಳೂರು. ಸೆಪ್ಟೆಂಬರ್ 1: ಕಳೆದ 2 ವಾರಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆಯು ಇಂದು ಚಿಕ್ಕಮಗಳೂರು ನಗರದಲ್ಲಿ ಮತ್ತೆ ಅಬ್ಬರಿಸಿದ್ದಾನೆ.
Recommended Video
ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚು ಮಳೆ ಸುರಿದು ಸಾಕಷ್ಟು ಅವಾಂತರಗಳನ್ನು ಸೃಷ್ಠಿಸಿದ್ದ ವರುಣ ಆಗಸ್ಟ್ 11ರ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಬಿಡುವು ನೀಡಿದ್ದ. ಜಿಲ್ಲೆಯ ಜನರಿಗೆ ಬೇಸಿಗೆ ಕಾಲದ ಅನುಭವವಾಗಿತ್ತು.
ಇಂದು ಬೆಳಿಗ್ಗೆಯಿಂದಲೂ ಚಿಕ್ಕಮಗಳೂರು ನಗರದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಬಿಸಿಲು ಇತ್ತು. ಮಧ್ಯಾಹ್ನ 1 ಗಂಟೆ ಆರಂಭವಾದ ದಿಢೀರ್ ಮಳೆ, ಸುಮಾರು ಅರ್ಧ ಗಂಟೆಗಳ ಕಾಲ ಮನಸ್ಸೋ ಇಚ್ಛೆ ಸುರಿದು ಮಲೆನಾಡಿಗರಿಗೆ ಮತ್ತೆ ಆತಂಕ ತಂದಿಟ್ಟಿದೆ.

ದಿಢೀರ್ ಆಗಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದಿದೆ. ಭಾರೀ ಮಳೆ ಕಂಡು ಸ್ಥಳೀಯರು ಮತ್ತೆ ಆತಂಕಗೊಂಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲೂ ಅಲ್ಲಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಕಳೆದ ವರ್ಷ ಹಾಗೂ ಈ ಬಾರಿ ಮಲೆನಾಡಲ್ಲಿ ಭಾರೀ ಮಳೆಯಾಗಿದೆ.
ಕಳೆದ ವರ್ಷವಂತೂ ಮಲೆನಾಡಿಗರು ಮನೆ-ಮಠ, ಆಸ್ತಿ-ಪಾಸ್ತಿ ಎಲ್ಲವನ್ನೂ ಕಳೆದುಕೊಳ್ಳುವಂತಹ ಸ್ಥಿತಿ ಎದುರಾಗಿತ್ತು. ಈ ವರ್ಷವೂ ಆಗಸ್ಟ್ ಆರಂಭದಲ್ಲಿ ಸುರಿದ ಮಳೆ ಅಂತಹದ್ದೇ ಭಯ ತರಿಸಿತ್ತು. ಆದರೆ ವರುಣದೇವ ಬಿಡುವು ನೀಡಿದ್ದರಿಂದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಸುರಿದ ದಿಢೀರ್ ಮಳೆ ಕಂಡು ಕಂಡು ಮತ್ತೆ ಭಯ ಭೀತರಾಗಿದ್ದಾರೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications