Heavy rain: ಬಿರುಗಾಳಿ ಮಳೆಗೆ ಹಾರಿಹೋದ 20ಕ್ಕೂ ಹೆಚ್ಚು ಮನೆಗಳ ಹೆಂಚುಗಳು, ಎಲ್ಲಿ?
ಚಿಕ್ಕಮಗಳೂರು, ನವೆಂಬರ್, 09: ಇಷ್ಟು ದಿನ ಜಿಲ್ಲೆಯಲ್ಲಿ ಮಳೆಯಿಲ್ಲದೆ ಜನರು ಬಿಸಿಲಿ ಬೇಗೆಯಿಂದ ಬೇಸತ್ತು ಹೋಗಿದ್ದರು. ಆದರೆ ಇದೀಗ ಭಾರೀ ಮಳೆ ಹಿನ್ನೆಲೆ ಬಯಲುಸೀಮೆ ಕಡೂರು ತಾಲೂಕಿನಲ್ಲಿ ಹಲವಾರು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನಿನ್ನೆ ಸಂಜೆಯಿಂದ ರಾತ್ರಿವರೆಗೂ ಬಿರುಗಾಳಿ ಮಳೆ ಸುರಿದ ಪರಿಣಾಮ ಕಡೂರಿನಲ್ಲಿ ಕುರುಬರಹಳ್ಳಿಯಲ್ಲಿ 20ಕ್ಕೂ ಹೆಚ್ಚು ಮನೆಯ ಹೆಂಚುಗಳು ಹಾರಿಹೋಗಿವೆ. 15ಕ್ಕೂ ಹೆಚ್ಚು ತೆಂಗಿನ ಮರಗಳು ಬುಡಸಮೇತ ಕಿತ್ತು ಬಿದ್ದಿವೆ. ವಿದ್ಯುತ್ ಕಂಬಗಳು ಮನೆ ಮೇಲೆ ಮುರಿದು ಬಿದ್ದಿ, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಇನ್ನು ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆಗೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆ ಜಲಾವೃತವಾಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.
ರಸ್ತೆ ಜಲಾವೃತ ವಾದ ಹಿನ್ನೆಲೆ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದ ಘಟನೆಯು ನಡೆಯಿತು. ರಸ್ತೆಯ ಮೇಲೆ ನದಿಯಂತೆ ನೀರು ಹರಿದಿದೆ. ಇನ್ನು ಕಡೂರು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ಚಿಕ್ಕಮಗಳೂರು ನಗರ, ಮೂಡಿಗೆರೆ, ಶೃಂಗೇರಿ ಭಾಗದಲ್ಲಿ ತುಂತುರು ಮಳೆ ಬಿದ್ದಿದೆ.
ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಳೆ
ಇನ್ನು ಇಷ್ಟು ದಿನ ಬಿಸಿಲಿನ ಧಗೆಯಿಂದ ತತ್ತರಿಸುತ್ತಿದ್ದ ಕೋಟೆ ನಾಡು ಈಗ ಭಾರೀ ಮಳೆಯಿಂದ ತಂಪಾಗಿದೆ. ಮತ್ತೊಂದೆಡೆ ಮಳೆ ಇಲ್ಲದ ಮುಗಿಲು ನೋಡುತ್ತಾ ಬರದ ದವಡೆಗೆ ಸಿಕ್ಕಿದ್ದ ಜನತೆಯ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಬುಧವಾರ 20.33 ಮಿಲಿ ಮೀಟರ್ ಸರಾಸರಿ ಮಳೆಯಾಗಿದೆ. ಹಿರಿಯೂರು-8.4 ಮಿಲಿ ಮೀಟರ್, ಬಬ್ಬೂರು10.6 ಮಿಲಿ ಮೀಟರ್, ಇಕ್ಕನೂರು 34.2 ಮಿಲಿ ಮೀಟರ್, ಈಶ್ವರಗೆರೆ 78.6 ಮಿಲಿ ಮೀಟರ್, ಸೂಗೂರು 38.2 ಮಿಲಿ ಮೀಟರ್ ಮಳೆಯಾದರೆ, ಜವನಗೊಂಡನಹಳ್ಳಿಯಲ್ಲಿ ಸುಸ್ಥಿತಿಯಲ್ಲಿಲ್ಲ ಎಂದು ವರದಿಯಾಗಿದೆ.
ಹೊಸದುರ್ಗ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು 32.22 ಸರಾಸರಿ ಮಳೆಯಾಗಿದೆ. ಹೊಸದುರ್ಗ 17.4 ಮಿಲಿ ಮೀಟರ್, ಬಾಗೂರು 30.1 ಮಿಲಿ ಮೀಟರ್, ಮತ್ತೋಡು 15.2 ಮಿಲಿ ಮೀಟರ್, ಶ್ರೀರಾಂಪುರ 50.2 ಮಿಲಿ ಮೀಟರ್, ಮಾಡದಕೆರೆಯಲ್ಲಿ 48.2 ಮಿಲಿ ಮೀಟರ್ ಮಳೆಯಾಗಿದೆ.
ಇನ್ನು ಚಿತ್ರದುರ್ಗ 2, 49 ಮಿಲಿ ಮೀಟರ್, ತುರುವನೂರು 65.4 ಮಿಲಿ ಮೀಟರ್, ಹಿರೇಗೊಂಟನೂರು-3.1 ಮಿಲಿ ಮೀಟರ್, ಭರಮಸಾಗರ -25.2 ಮಿಲಿ ಮೀಟರ್, ಸಿರಿಗೆರೆ 38.0 ಮಿಲಿ ಮೀಟರ್, ಐನಹಳ್ಳಿಯಲ್ಲಿ 66.4 ಮಿಲಿ ಮೀಟರ್ ಮಳೆ ಸುರಿದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications