ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಕಾರ ಮಳೆ
ಚಿಕ್ಕಮಗಳೂರು, ಜುಲೈ, 19: ಮುಂಗಾರು ಆರಂಭವಾದಾಗಿನಿಂದಲೂ ದಕ್ಷಿಣ ಕನ್ನದ ಜಿಲ್ಲೆಯ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಆದರೆ ಇದೀಗ ರಾಜ್ಯದ ಬಹುತೇಕ ಕಡೆ ಮುಂಗಾರು ಚುರಕು ಪಡೆದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಅದೇ ರೀತಿ ರೀತಿ ಇಂದು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕಿನಾದ್ಯಂತ ಇಂದು ಮುಂಜಾನೆಯಿಂದಲೂ ಭಾರೀ ಮಳೆ ಸುರಿಯುತ್ತಲೇ ಇದೆ. ಅದರಲ್ಲೂ ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ನಲ್ಲಿ ವಾಹನ ಸವಾರರ ಪಾಡಂತೂ ಹೇಳತೀರದಾಗಿದೆ.

ವಾಹನ ಸವಾರರ ಪರದಾಟ
ಹಾಗೆಯೇ ಸಾಮಾನ್ಯವಾಗಿ ಮಳೆಗಾಲದಲ್ಲಿ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದುತ್ತದೆ. ಅದೇ ರೀತಿ ಇಂದು ಕೂಡ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನೋಡಲು ಪ್ರವಾಸಿಗರು ಕಿಕ್ಕಿರಿದು ಆಗಮಿಸಿದ್ದಾರೆ. ಆದರೆ ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ವಾಹನ ಚಾಲನೆ ಮಾಡಲು ಸವಾರರು ಪರದಾಡಿದ ಘಟನೆಯೂ ನಡೆದಿತ್ತು.
ಕಿರಿದಾದ ಸಾವಿರಾರು ಅಡಿ ಪ್ರಪಾತದ ರಸ್ತೆಯಲ್ಲಿ ವಾಹನ ಚಾಲನೆಗೆ ದಟ್ಟನೆಯ ಮಂಜು ಅಡ್ಟಿಯಾಗುತ್ತಿದೆ. ಇನ್ನು ಬೇರೆ ದಾರಿಯಿಲ್ಲದೆ ವಾಹನಗಳ ಹೆಡ್ ಲೈಟ್ ಹಾಕಿಕೊಂಡು ಸವಾರರು ಚಾಲನೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಈ ವಾಹನಗಳ ಹೆಡ್ಲೈಟ್ಗಳು ಎದುರುಗಡೆ ಬರುವ ಸವಾರರ ಕಣ್ಣಿಗೆ ನೇರವಾಗಿ ಬೀಳುತ್ತಿದ್ದು, ಇದರಿಂದ ಕಿರಿಕಿರಿ ಅನುಭವಿಸುವಂತಾಗಿದೆ.
ಹಾಗೆಯೇ ಕಳೆದ 5 ನಾಲ್ಕು ದಿನಗಳಿಂದ ಚಾರ್ಮಾಡಿ ಘಾಟ್ನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಮಂಜು ಹೆಚ್ಚಾಗಿದೆ. ಸಣ್ಣ ಪ್ರಮಾಣದ ಮಳೆ ಹಾಗೂ ಮಂಜಿನ ಆಟಕ್ಕೆ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.
ದಟ್ಟವಾದ ಮಂಜು ರಸ್ತೆಯನ್ನು ಆವರಿಸುವುದರಿಂದ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಲಾಗುತ್ತದೆ. ಒಂದು ವೇಳೆ ಇಲ್ಲಿ ಈ ಸಮಯದಲ್ಲಿ ಜೋರಾಗಿ ವಾಹನ ಚಾಲನೆ ಮಾಡಿದರೆ ಅಪಘಾತ ಆಗುವು ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ನಿಧಾನಗತಿಯಲ್ಲಿ ವಾಹನ ಚಾಲನೆ ಮಾಡುತ್ತಿದ್ದು, ಇದರಿಂದ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications