ಕಾಫಿನಾಡಿನಲ್ಲಿ ಜೋರಾದ ಮಳೆಯ ಆರ್ಭಟ: ಶೃಂಗೇರಿಯಲ್ಲಿ ಭೂಕುಸಿತ
ಚಿಕ್ಕಮಗಳೂರು, ಜುಲೈ 08: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಮಳೆಯ ಆರ್ಭಟಕ್ಕೆ ಮನೆ ಮುಂದೆ ಭೂ ಕುಸಿತ ಉಂಟಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೇಗಲುಬೈಲು ಗ್ರಾಮದಲ್ಲಿ ನಡೆದಿದೆ.
ಮನೆ ಮುಂದೆ ಭೂ ಕುಸಿತದಿಂದ ಕುಟುಂಬಸ್ಥರಲ್ಲಿ ಆತಂಕ ಉಂಟಾಗಿದೆ, ಅವೈಜ್ಞಾನಿಕ ರಸ್ತೆ ನಿರ್ಮಾಣ ದಿಂದ ಭೂ ಕುಸಿತವಾಗಿದೆ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಮುಂದೆಯೇ ಭೂ ಕುಸಿತದಿಂದ ಬಡ ಕುಟುಂಬಗಳು ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೇಗಲುಬೈಲು ಗ್ರಾಮದ ವೇದಾ, ಪುಟ್ಟ ಎಂಬುವರಿಗೆ ಸೇರಿದ ಮನೆ ಮುಂದೆ ಭೂ ಕುಸಿತವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರು ಆಗ್ರಹ ಮಾಡಿದ್ದಾರೆ.

ಮಳೆಯ ಆರ್ಭಟಕ್ಕೆ ಮನೆ ಮುಂದಿದ್ದ ತಡೆಗೋಡೆ ಕುಸಿತ
ಮಳೆಯಿಂದ ಸಾಕಷ್ಟು ಅನಾವುತಗಳೇ ಸೃಷ್ಟಿಯಾಗುತ್ತಿವೆ. ಮಳೆಯ ಆರ್ಭಟಕ್ಕೆ ಮನೆಯ ಮುಂದೆ ನಿರ್ಮಿಸಿದ್ದ ತಡೆಗೋಡೆ ಕುಸಿತವಾಗಿದೆ. ಜಿಲ್ಲೆಯ ಕೊಪ್ಪ ತಾಲೂಕಿನ ಹೊಸಮನೆ ಕೆಸವೆ ಗ್ರಾಮದಲ್ಲಿ ಘಟನೆ ನಡೆದಿದ್ದು ಕುಟುಂಬಸ್ಥರು ಕಂಗಲಾಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದ ಮನೆಯ ತಡೆಗೋಡೆ ಕುಸಿತವಾಗಿದ್ದು ಮಲೆನಾಡಿಗರು ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಮರ, ಮನೆಯ ಮೇಲ್ಚಾವಣಿಗೆ ಹಾನಿ
ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದು ಮನೆಯ ಮೇಲ್ಚಾವಣಿಗೆ ಹಾನಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕುಡಿಗೆ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು ಮಳೆಯ ಆರ್ಭಟಕ್ಕೆ ಅಲ್ಲಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಜೋರಾದ ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದು ಮನೆಯ ಮೇಲ್ಚಾವಣಿ ಸಂಪೂರ್ಣ ಹಾನಿಯಾಗಿದ್ದು ಮನೆ ಮಾಲೀಕರು ಕಂಗಲಾಗಿದ್ದಾರೆ
ಉಕ್ಕಿ ಹರಿಯುತ್ತಿರುವ ಹಳ್ಳ ದಾಟಲು ಕಾಲು ಸಂಕವೇ ಆಸರೆ, ಸ್ವಲ್ಪ ಯಾಮಾರಿದ್ರು ಜೀವಕ್ಕೆ ಕುತ್ತು!
ಮಲೆನಾಡಲ್ಲಿ ಸುರಿಯುತ್ತಿರುವ ಮಳೆಯಿಂದ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಣಬೈಲು, ಹಡ್ಲು ಮನೆ ಗ್ರಾಮಸ್ಥರು ಹಳ್ಳವನ್ನ ದಾಟಿಯೇ ಊರಿಗೆ ಹೋಗಬೇಕು, ಹಳ್ಳ ದಾಟಲು ಕಾಲು ಸಂಕವೇ ಇವರಿಗೆ ಆಸರೆಯಾಗಿದ್ದು ಸ್ವಲ್ಪ ಯಾಮಾರಿದರೂ ಜೀವಕ್ಕೆ ಕುತ್ತು ಬರಲಿದೆ.

ಮಳೆ ಆರಂಭವಾಗುತ್ತಿದ್ದಂತೆ ಈ ಗ್ರಾಮದ ಜನರು ಜೀವ ಕೈಯಲ್ಲಿ ಹಿಡಿದು ಓಡಾಡಬೇಕು, ಕೊಣಬೈಲು, ಹಡ್ಲುಮನೆಯ 15 ಕುಟುಂಬಗಳು ಪ್ರಾಣಭಯದಲ್ಲೇ ಸಂಚಾರ ಮಾಡಬೇಕಿದೆ. ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಎಲ್ಲರೂ ಈ ಹಳ್ಳವನ್ನ ದಾಟಿ ಮನೆ ಸೇರಬೇಕಾಗಿದೆ. ಇನ್ನು ಹತ್ತಾರು ವರ್ಷಗಳಿಂದ ಕಿರು ಸೇತುವೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರಿಂದ ಹತ್ತಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲ ಮುಗಿದ ಮೇಲಾದರೂ ನಮಗೆ ಕಿರು ಸೇತುವೆಯೊಂದು ನಿರ್ಮಿಸಿ ಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications