Rain in Chikkamagaluru: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ- ಹೆದ್ದಾರಿಗಳು ಜಲಾವೃತ
ಚಿಕ್ಕಮಗಳೂರು, ನವೆಂಬರ್, 09: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆಗೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆ ಜಲಾವೃತವಾಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.
ರಸ್ತೆ ಜಲಾವೃತ ವಾದ ಹಿನ್ನೆಲೆ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದ ಘಟನೆಯು ನಡೆಯಿತು. ರಸ್ತೆಯ ಮೇಲೆ ನದಿಯಂತೆ ನೀರು ಹರಿದಿದೆ. ಇನ್ನು ಕಡೂರು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ಚಿಕ್ಕಮಗಳೂರು ನಗರ , ಮೂಡಿಗೆರೆ, ಶೃಂಗೇರಿ ಭಾಗದಲ್ಲಿ ತುಂತುರು ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ.

ಕೋಟೆನಾಡಿನಲ್ಲಿ ಭಾರೀ ಮಳೆ
ಇನ್ನು ಇಷ್ಟು ದಿನ ಬಿಸಿಲಿನ ಧಗೆಯಿಂದ ತತ್ತರಿಸುತ್ತಿದ್ದ ಕೋಟೆ ನಾಡು ಈಗ ಭಾರೀ ಮಳೆಯಿಂದ ತಂಪಾಗಿದೆ. ಮತ್ತೊಂದೆಡೆ ಮಳೆ ಇಲ್ಲದ ಮುಗಿಲು ನೋಡುತ್ತಾ ಬರದ ದವಡೆಗೆ ಸಿಕಿದ್ದ ಜನತೆಯ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಬುಧವಾರ 20.33 ಮಿಲಿ ಮೀಟರ್ ಸರಾಸರಿ ಮಳೆಯಾಗಿದೆ. ಹಿರಿಯೂರು-8.4 ಮಿಲಿ ಮೀಟರ್, ಬಬ್ಬೂರು10.6 ಮಿಲಿ ಮೀಟರ್, ಇಕ್ಕನೂರು 34.2 ಮಿಲಿ ಮೀಟರ್, ಈಶ್ವರಗೆರೆ 78.6 ಮಿಲಿ ಮೀಟರ್, ಸೂಗೂರು 38.2 ಮಿಲಿ ಮೀಟರ್ ಮಳೆಯಾದರೆ, ಜವನಗೊಂಡನಹಳ್ಳಿಯಲ್ಲಿ ಸುಸ್ಥಿತಿಯಲ್ಲಿಲ್ಲ ಎಂದು ವರದಿಯಾಗಿದೆ.
ಹೊಸದುರ್ಗ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು 32.22 ಸರಾಸರಿ ಮಳೆಯಾಗಿದೆ. ಹೊಸದುರ್ಗ 17.4 ಮಿಲಿ ಮೀಟರ್, ಬಾಗೂರು 30.1 ಮಿಲಿ ಮೀಟರ್, ಮತ್ತೋಡು 15.2 ಮಿಲಿ ಮೀಟರ್, ಶ್ರೀರಾಂಪುರ 50.2 ಮಿಲಿ ಮೀಟರ್, ಮಾಡದಕೆರೆಯಲ್ಲಿ 48.2 ಮಿಲಿ ಮೀಟರ್ ಮಳೆಯಾಗಿದೆ.
ಇನ್ನು ಚಿತ್ರದುರ್ಗ 2, 49 ಮಿಲಿ ಮೀಟರ್, ತುರುವನೂರು 65.4 ಮಿಲಿ ಮೀಟರ್, ಹಿರೇಗೊಂಟನೂರು-3.1 ಮಿಲಿ ಮೀಟರ್, ಭರಮಸಾಗರ -25.2 ಮಿಲಿ ಮೀಟರ್, ಸಿರಿಗೆರೆ 38.0 ಮಿಲಿ ಮೀಟರ್, ಐನಹಳ್ಳಿಯಲ್ಲಿ 66.4 ಮಿಲಿ ಮೀಟರ್ ಮಳೆ ಸುರಿದಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications