Rain in Chikkamagaluru: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ- ಹೆದ್ದಾರಿಗಳು ಜಲಾವೃತ

ಚಿಕ್ಕಮಗಳೂರು, ನವೆಂಬರ್‌, 09: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆಗೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆ ಜಲಾವೃತವಾಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

ರಸ್ತೆ ಜಲಾವೃತ ವಾದ ಹಿನ್ನೆಲೆ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದ ಘಟನೆಯು ನಡೆಯಿತು. ರಸ್ತೆಯ ಮೇಲೆ ನದಿಯಂತೆ ನೀರು ಹರಿದಿದೆ. ಇನ್ನು ಕಡೂರು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ಚಿಕ್ಕಮಗಳೂರು ನಗರ , ಮೂಡಿಗೆರೆ, ಶೃಂಗೇರಿ ಭಾಗದಲ್ಲಿ ತುಂತುರು ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ.

Heavy rain: National Highway flooded near Kadur

ಕೋಟೆನಾಡಿನಲ್ಲಿ ಭಾರೀ ಮಳೆ

ಇನ್ನು ಇಷ್ಟು ದಿನ ಬಿಸಿಲಿನ ಧಗೆಯಿಂದ ತತ್ತರಿಸುತ್ತಿದ್ದ ಕೋಟೆ ನಾಡು ಈಗ ಭಾರೀ ಮಳೆಯಿಂದ ತಂಪಾಗಿದೆ. ಮತ್ತೊಂದೆಡೆ ಮಳೆ ಇಲ್ಲದ ಮುಗಿಲು ನೋಡುತ್ತಾ ಬರದ ದವಡೆಗೆ ಸಿಕಿದ್ದ ಜನತೆಯ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ ಬುಧವಾರ 20.33 ಮಿಲಿ ಮೀಟರ್‌ ಸರಾಸರಿ ಮಳೆಯಾಗಿದೆ. ಹಿರಿಯೂರು-8.4 ಮಿಲಿ ಮೀಟರ್‌, ಬಬ್ಬೂರು10.6 ಮಿಲಿ ಮೀಟರ್, ಇಕ್ಕನೂರು 34.2 ಮಿಲಿ ಮೀಟರ್, ಈಶ್ವರಗೆರೆ 78.6 ಮಿಲಿ ಮೀಟರ್, ಸೂಗೂರು 38.2 ಮಿಲಿ ಮೀಟರ್ ಮಳೆಯಾದರೆ, ಜವನಗೊಂಡನಹಳ್ಳಿಯಲ್ಲಿ ಸುಸ್ಥಿತಿಯಲ್ಲಿಲ್ಲ ಎಂದು ವರದಿಯಾಗಿದೆ.

ಹೊಸದುರ್ಗ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು 32.22 ಸರಾಸರಿ ಮಳೆಯಾಗಿದೆ. ಹೊಸದುರ್ಗ 17.4 ಮಿಲಿ ಮೀಟರ್, ಬಾಗೂರು 30.1 ಮಿಲಿ ಮೀಟರ್, ಮತ್ತೋಡು 15.2 ಮಿಲಿ ಮೀಟರ್, ಶ್ರೀರಾಂಪುರ 50.2 ಮಿಲಿ ಮೀಟರ್, ಮಾಡದಕೆರೆಯಲ್ಲಿ 48.2 ಮಿಲಿ ಮೀಟರ್ ಮಳೆಯಾಗಿದೆ.

ಇನ್ನು ಚಿತ್ರದುರ್ಗ 2, 49 ಮಿಲಿ ಮೀಟರ್‌, ತುರುವನೂರು 65.4 ಮಿಲಿ ಮೀಟರ್‌, ಹಿರೇಗೊಂಟನೂರು-3.1 ಮಿಲಿ ಮೀಟರ್‌, ಭರಮಸಾಗರ -25.2 ಮಿಲಿ ಮೀಟರ್‌, ಸಿರಿಗೆರೆ 38.0 ಮಿಲಿ ಮೀಟರ್‌, ಐನಹಳ್ಳಿಯಲ್ಲಿ 66.4 ಮಿಲಿ ಮೀಟರ್ ಮಳೆ ಸುರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+