ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲೆನಾಡು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 16: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕದ ಕಾಫಿನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.

Recommended Video

ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ.

ಉಡುಪಿಯಲ್ಲಿ ಮುಂದಿನ ಆರು ದಿನ ಭಾರೀ ಮಳೆ; ಯಲ್ಲೋ ಅಲರ್ಟ್ ಘೋಷಣೆಉಡುಪಿಯಲ್ಲಿ ಮುಂದಿನ ಆರು ದಿನ ಭಾರೀ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಇಂದು ಮಧ್ಯಾಹ್ನದಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.

Heavy Rainfall In Across Chikkamagaluru District

ಕಳೆದ ರಾತ್ರಿಯೂ ಮಳೆ ಸುರಿದಿದ್ದರಿಂದ ಜಿಲ್ಲೆಯ ಜೀವ ನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳಗೊಂಡಿದೆ. ವರುಣನ ಅಬ್ಬರ ಹೀಗೇ ಮುಂದುವರೆದರೆ ಅಪಾಯ ಎದುರಾಗಲಿದ್ದು, ಜನರು ಆತಂಕದಲ್ಲಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

ಇದರ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತೃ ವಿಯೋಗದ ಮಧ್ಯೆಯೂ ಕೊರೊನಾ ವೈರಸ್ ಸೋಂಕಿತೆ ಮಗುವಿಗೆ ಜನ್ಮ ನೀಡಿದ್ದಾಳೆ. ನಿನ್ನೆ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ಪತ್ತೆಯಾಗಿತ್ತು.

Heavy Rainfall In Across Chikkamagaluru District

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಮಹಿಳೆಯು ಚಿಕ್ಕಮಗಳೂರಿನ ಕೋವಿಡ್ ಅಸ್ಪತ್ರೆಗೆ ದಾಖಲಾಗಿದ್ದಳು. ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದಳು.

ಮಗು ಆರೋಗ್ಯವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಗರ್ಭಿಣಿಯ ತಾಯಿಯಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿತ್ತು, ಆದರೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

English summary
The rains have increased amid fears of coronavirus infection in Malenadu Of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X