ದತ್ತ ಜಯಂತಿ ಆಚರಣೆ; ಚಿಕ್ಕಮಗಳೂರು ಜಿಲ್ಲಾದ್ಯಂತ ಹೈ ಅಲರ್ಟ್
ಚಿಕ್ಕಮಗಳೂರು, ಡಿಸೆಂಬರ್ 9: ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ದತ್ತಜಯಂತಿ ಆಚರಣೆಗೆ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಡಿಸೆಂಬರ್ 10ರಂದು ಅನಸೂಯ ಜಯಂತಿ, 11ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ 12ರಂದು 20 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಪಡೆದು ಹೋಮ-ಹವನ ನಡೆಸಲಿದ್ದಾರೆ. ಈ 3 ದಿನಗಳ ಕಾಲ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು ಜಿಲ್ಲಾದ್ಯಂತ 5100ಕ್ಕೂ ಅಧಿಕ ಪೊಲೀಸರು ಸರ್ಪಗಾವಲಿದ್ದಾರೆ.
ಇಂದು ಮೂರು ಸಾವಿರಕ್ಕೂ ಅಧಿಕ ಪೊಲೀಸರು ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ದಾರೆ. ಬಂದೋಬಸ್ತ್ ಗಾಗಿ ಜಿಲ್ಲಾದ್ಯಂತ 35 ಚೆಕ್ ಪೋಸ್ಟ್, 48 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಹಾಗೂ 800ಕ್ಕೂ ಅಧಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಡಿಸೆಂಬರ್ 12ರಂದು ಚಿಕ್ಕಮಗಳೂರಿನ ಕೆ.ಎಂ.ರಸ್ತೆ, ಐ.ಜಿ. ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ ಸೇರಿದಂತೆ ಆಲ್ದೂರು ಪಟ್ಟಣ, ಹಾಂದಿಯಿಂದ ವಸ್ತಾರೆವರೆಗೆ ಅಂಗಡಿ-ಮುಂಗಟ್ಟುಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ. ಡಿಸೆಂಬರ್ 10 ರಿಂದ 12ರವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಿಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರನ್ನು ಸಂಪೂರ್ಣ ನಿಷೇಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications