CT Ravi Dance: ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ: ಸಿ.ಟಿ.ರವಿ ಭರ್ಜರಿ ಡ್ಯಾನ್ಸ್- ವಿಡಿಯೋ ವೈರಲ್
ಚಿಕ್ಕಮಗಳೂರು ಸೆಪ್ಟೆಂಬರ್ 7: ಇಂದು ಗಣೇಶ ಚತುರ್ಥಿ ಹಬ್ಬ. ದೇಶದೆಲ್ಲೆಡೆ ಜನ ವಿನಾಯಕ ಚತುರ್ಥಿ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಚೌತಿ ಆಚರಣೆ ಜೋರಾಗಿದ್ದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಹೌದು.. ಇಂದು ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡಲಾಯಿತು. ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ವೇಳೆ ಡ್ರಮ್ ಸೆಟ್ ಶಬ್ಧಕ್ಕೆ ಸಿ.ಟಿ.ರವಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗಣಪತಿ ತರುವಾಗ ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆ ಮಧ್ಯೆ ಸಿ.ಟಿ.ರವಿ ಕುಣಿದು ಕುಪ್ಪಳಿಸಿದ್ದಾರೆ. ಸಿ.ಟಿ.ರವಿ ನೃತ್ಯ ಮಾಡುತ್ತಿದ್ದಂತೆ ಖುಷಿಯಾದ ಹುಡುಗರು ತಾವೂ ಕೂಡ ಅವರೊಂದಿಗೆ ಜೋಷ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಇಂದು ಕಾಫಿನಾಡಿನ ಪ್ರತಿಷ್ಠಿತ ಹಿಂದೂ ಮಹಾ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಗಣಪತಿಯನ್ನು ತರುವಾಗ ಮೆರವಣಿಗೆಯಲ್ಲಿ ಯುವಕರು ಕುಣಿದು ಕುಪ್ಪಳಿಸಿದರು. ಕಳೆದ ಹತ್ತು ವರ್ಷದಿಂದ ಚಿಕ್ಕಮಗಳೂರು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗಿದೆ.
ಈ ಬಾರಿಯೂ ಅದೇ ಉತ್ಸಾಹದಲ್ಲಿ ಪುಟಾಣಿ ಮಕ್ಕಳು, ಯುವಕ, ಯುವತಿಯರು ನೃತ್ಯ ಮಾಡಿ ಗಜಾನನ್ನು ಸ್ವಾಗತಿಸಿದರು. ಗಣೇಶನನ್ನು ಕರೆತರುವ ದಾರಿಯುದ್ದಕ್ಕೂ ಗಣೇಶನಿಗೆ ವಿಶೇಷ ಪೂಜೆ, ಮಂಗಳಾರತಿ ಮಾಡಿಸಿ ಸಂಭ್ರಮಿಸಿದರು. ಅಲಂಕೃತಗೊಂಡ ಗಣಪನನ್ನು ಮಂಗಳವಾದ್ಯದೊಂದಿಗೆ ಮೆರವಣಿ ಮಾಡಿಕೊಂಡು ಸ್ವಾಗತ ಮಾಡಲಾಯಿತು.

ಬಿಳಿ ಬಣ್ಣದ ಸಾಂಪ್ರದಾಯಿಕ ಬಟ್ಟೆ ಧರಿಸಿದ ಹಿಂದೂ ಮಹಾ ಗಣಪತಿ ಸಮಿತಿ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಮೆರವಣಿಗೆಗೆ ವಿಶೇಷ ಕಳೆ ತಂದಿದ್ದರು. ಅಲ್ಲದೆ ಸಂಭ್ರಮದ ಮೆರವಣಿಗೆಗೆ ಭಕ್ತಿ ಭಾವವನ್ನು ತುಂಬಿದ್ದರು. ಅದರೊಂದಿಗೆ ದಾರಿ ಉದ್ದಕ್ಕೂ ಡಿಜೆ ಸದ್ದಿಗೆ ಸಹಸ್ರಾರು ಮಂದಿ ಏಕ ಕಾಲದಲ್ಲಿ ಹೆಜ್ಜೆ ಹಾಕಿದ ದೃಶ್ಯ ಆಕರ್ಷಕವಾಗಿತ್ತು. ಗಣಪತಿ ಬಪ್ಪ ಮೋರಯಾ, ವಿನಾಯಕನಿಗೆ ಜಯವಾಗಲಿ ಎನ್ನುವ ಘೋಷಣೆಗಳು ಮುಗಿಲು ಮುಟ್ಟಿದ್ದವು.
ಇದೇ ವೇಳೆ ಹಿಂದೂ ಮಹಾಸಭಾ ಗಣಪತಿ ಮೂರ್ತಿ ಸ್ವಾಗತ ವೇಳೆ ಚಿಕ್ಕಮಗಳೂರು ಶಾಸಕ ಸಿಟಿ ರವಿ ಯುವಕರೊಂದಿಗೆ ಕುಣಿಯುವ ಮೂಲಕ ಎಲ್ಲರ ಗಮನ ಸೆಳೆದರು. ಸಿಟಿ ರವಿ ಅವರು ನೃತ್ಯ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಹಲವಾರು ಬಾರಿ ನೃತ್ಯ ಮಾಡಿದ್ದಾರೆ.
ಇಂದಿನ ಗಣಪನನ್ನು ಸ್ವಾಗತಿಸುವ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಉದ್ದಕ್ಕೂ ದಾರಿಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದರು. ಮುಂಜಾಗ್ರತೆಗಾಗಿ ಗಣೇಶ ಸಾಗಿ ಬರುವ ದಾರಿಯಲ್ಲಿ ಪಥಸಂಚಲನ ಮಾಡಲಾಗಿತ್ತು.
ಹೀಗೆ ಚಿಕ್ಕಮಗಳೂರಿನಲ್ಲಿ ಮಹಾಸಭಾ ಗಣಪತಿ ಮೂರ್ತಿಯನ್ನು ಸ್ವಾಗತ ಮಾಡಲಾಗಿದ್ದು ಅದರಲ್ಲೂ ಬಿಜೆಪಿ ನಾಯಕರು ಡಿಜೆ ಸೌಂಡ್ಗೆ ಸ್ಟೆಪ್ ಹಾಕಿರುವುದು ಹೆಚ್ಚಾಗಿ ಗಮನ ಸೆಳೆದಿದೆ. ಅಲ್ಲದೇ ಯುವಕರು, ಮಕ್ಕಳು ಹೆಜ್ಜೆ ಹಾಕಿ ಗಣೇಶನ ಸ್ವಾಗತಿ ಮೆರವಣಿಗೆಯ ರಂಗನ್ನು ಹೆಚ್ಚಿಸಿದರು.
ಗಣೇಶನ ವಿಸರ್ಜಯಂದು ಬಸವನಹಳ್ಳಿ ಓಂಕಾರೇಶ್ವರ ದೇವಸ್ಥಾನ, ಆಶೀರ್ವಾದ ಸರ್ಕಲ್, ವಿಜಯಪುರ ಮುಖ್ಯ ರಸ್ತೆ, ಮಲ್ಲಂದೂರು ರಸ್ತೆ, ಉಪ್ಪಳ್ಳಿ ವೃತ್ತದವರೆಗೆ ತೆರಳಿ, ಐಜಿ ರಸ್ತೆ, ರಾಘವೇಂದ್ರ ಸ್ವಾಮಿ ಮಠದ ರಸ್ತೆ, ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಕೆಎಂ ರಸ್ತೆ ಮೂಲಕ ಸಾಗಲಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications