ಅದ್ಧೂರಿಯಾಗಿ ನಡೆದ ಹಿರೇಮಗಳೂರು ಕೋದಂಡರಾಮ ಬ್ರಹ್ಮರಥೋತ್ಸವ
ಚಿಕ್ಕಮಗಳೂರು, ಮಾರ್ಚ್ 05: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಗರದ ಹೊರವಲಯದ ಹಿರೇಮಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಕೋದಂಡರಾಮಚಂದ್ರ ಸ್ವಾಮಿಯ ಬ್ರಹ್ಮ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ 6 ಗಂಟೆಯಿಂದ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಆರಂಭವಾದವು. ಮುಂಜಾನೆ ಸುಪ್ರಭಾತ, ಅಲಂಕಾರ ಸೇವೆ, ಯಾತ್ರಾದಾನ ಉತ್ಸವ ಹಾಗೂ ಭ್ರಹ್ಮರಥ ಶಾಂತಿ ಹೋಮಗಳು ನಡೆದವು. ರಥೋತ್ಸವದ ಪ್ರಯುಕ್ತ ಕೋದಂಡರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಮಧ್ಯಾಹ್ನ 12.15 ರಿಂದ 1 ಗಂಟೆ ವರೆಗೆ ಅಭಿಜಿನ ಮಹೂರ್ತದಲ್ಲಿ ವಿವಿಧ ಧಾರ್ಮಿಕ ವಿಧಿಗಳು ನಡೆದ ನಂತರ, ಕನ್ನಡ ರಾಮನ ಉತ್ಸವ ಮೂರ್ತಿಯನ್ನು ಅಲಂಕೃತ ರಥದಲ್ಲಿ ಇರಿಸುತ್ತಿದ್ದಂತೆ ಅಲ್ಲಿ ಸೇರಿದ್ದ ಸಾವಿರಾರು ಭಕ್ತರು ಹರೇ ರಾಮ, ಗೋವಿಂದಾ.. ಗೋವಿಂದಾ ಎನ್ನುವ ಘೋಷಣೆಗಳನ್ನು ಕೂಗಿದರು.

ಪಾಚರಾತ್ರ ಆಗಮೋಕ್ತವಾಗಿ ಬಲಿಪೂಜೆ ನಡೆದ ನಂತರ ಮಂಗಳವಾದ್ಯದ ಜೊತೆಗೆ ಕಹಳೆಯ ಧ್ವನಿ ಮೊಳಗುತ್ತಿದ್ದಂತೆ ನೂರಾರು ಜನರು ಸೇರಿ ರಥವನ್ನು ಎಳೆದರು. ವೇದ ವಿದ್ವಾಂಸರ ಮಂತ್ರಘೋಷ, ಭಕ್ತರಿಂದ ಶ್ರೀರಾಮನ ಭಜನೆಯೊಂದಿಗೆ ರಥವವನ್ನು ದೇವಸ್ಥಾನದ ಆವರಣದ ರಸ್ತೆಯಲ್ಲಿ ಎಳೆದು ತರಲಾಯಿತು.
ಪ್ರಧಾನ ಅರ್ಚಕ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ವೇದಬ್ರಹ್ಮ ಶ್ರೀನಿವಾಸಾಚಾರ್ಯ, ವೇದಾಂತಾಚಾರ್ಯ, ಹಿರೇಮಗಳೂರಿನ ವೇದಾಧ್ಯಾಯಿ ವೈಷ್ಣವಸಿಂಹ ಅವರುಗಳು ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು.
ಮನೆಗಳ ಮುಂದೆ ರಂಗೋಲಿ ಹಾಕಿ ಉತ್ಸವ ಮೂರ್ತಿಯನ್ನು ಸ್ವಾಗತಿಸಿದ ಗ್ರಾಮಸ್ಥರು, ಆರತಿ ಎತ್ತಿ ಇಡುಗಾಯಿ ಒಡೆದು ಬೀಳ್ಕೊಟ್ಟರು, ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆ ಕನ್ನಡ ರಾಮನಿಗೆ ಸುಪ್ರಭಾತ ಸೇವೆ, ವಿಶೇಷ ಅಲಂಕಾರ, ಬ್ರಹ್ಮರಥ ಶಾಂತಿ ಹೋಮ, ಯಾತ್ರಾ ದಾನ, ಶ್ರೀ ಕೃಷ್ಣಗಂಧೋತ್ಸವ ಜರುಗಿದವು.
ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಾಗೂ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಉತ್ಸವದಲ್ಲಿ ಭಾಗವಹಿಸಿ ಶ್ರೀರಾಮನ ಕೃಪೆಗೆ ಪಾತ್ರರಾದರು.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications